Advertisement
ಸುದ್ದಿಗಳು

ಪುತ್ತೂರು ಜೋಡಿ ಕೊಲೆ ಪ್ರಕರಣ : 24 ಗಂಟೆಯಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

Share

ಪುತ್ತೂರು: ಪುತ್ತೂರು ತಾಲೂಕಿನ ಕುರಿಯ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು  24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆರೋಪಿಯು ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ ಕರೀಂ ಖಾನ್ ( 29 ವರ್ಷ).

ಕರೀಂ ಖಾನ್

ಆರೋಪಿ ಕರೀಂ ಖಾನ್ ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಶೇಕ್ ಕೊಗ್ಗು ಸಾಹೇಬ್ ಅವರ ಮನೆಗೆ ಕಳ್ಳತನದ ಉದ್ದೇಶದಿಂದ  ಮನೆಯ ಗೋಡೆ ಮತ್ತು ಹಂಚಿನ ನಡುವೆ ನುಸುಳಿ ಒಳ ಪ್ರವೇಶಿಸಿದ್ದು ಕಳ್ಳತನ ನಡೆಸುವ ವೇಳೆ ಮನೆಯ ಸದಸ್ಯರು ಎಚ್ಚರಗೊಂಡಿರುತ್ತಾರೆ ಹೀಗಾಗಿ ಮನೆಯ ಸದಸ್ಯರಿಗೆ ಪರಿಚಿತನಾಗಿದ್ದು ತಾನು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಭಯದಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ.ಆರೋಪಿ ಕರೀಂ ಖಾನ್ ಶೇಕ್ ಕೊಗ್ಗು ಸಾಹೇಬ್ ರವರೊಂದಿಗೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮನಸ್ತಾಪವನ್ನೂ ಹೊಂದಿದ್ದ ಎಂದೂ ಪೊಲೀಸರಲ್ಲಿ  ಬಾಯಿಬಿಟ್ಟಿದ್ದಾನೆ.

ಕಳ್ಳತನದ ವೇಳೆ ಮನೆಯವರಿಗೆ ಎಚ್ಚರವಾದ್ದು ತಿಳಿದು  ಅಡುಗೆ ಕೋಣೆಯಲ್ಲಿದ್ದ ಕೊಕ್ಕೆ ಕತ್ತಿಯಿಂದ ಮನೆಯಲ್ಲಿದ್ದ ಶೇಕ್ ಕೊಗ್ಗು ಸಾಹೇಬ್ ( 70 ವರ್ಷ), ಶಾಮಿಯಾ ಭಾನು (16 ವರ್ಷ) ಎಂಬವರುಗಳು ಹತ್ಯೆ ನಡೆಸಿದ್ದು, ಖತೀಜಾಬಿ (65 ವರ್ಷ) ಎಂಬವರಿಗೆ ಗಂಭೀರ ಹಲ್ಲೆ ನಡೆಸಿದ್ದ. ಬಳಿಕ ಮನೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,000 ರೂಪಾಯಿ ನಗದನ್ನು ಕಳ್ಳತನ ನಡೆಸಿ ಮನೆಯ ಹಿಂಬಾಗಿಲಿನ ಮೂಲಕ ತೆರಳಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸರು ಠಾಣಾ ವ್ಯಾಪ್ತಿಯ ಕುರಿಯ ಗ್ರಾಮದ ಬೀಟ್ ಸಿಬ್ಬಂದಿ ಭೀಮ್ ಶೇನ್ ರವರು ನೀಡಿದ ಸುಳಿವಿನ ಆಧಾರದಲ್ಲಿ ಆರೋಪಿಯನ್ನು ದಬಂಧಿಸಿದ್ದು ತನಿಖೆ ಪ್ರಗತಿಯಲ್ಲಿದೆ.ಆರೋಪಿಯ ಕೈಗೆ ಕೃತ್ಯ ನಡೆಸುವ ವೇಳೆ ಉಂಟಾದ ಘರ್ಷಣೆಯಲ್ಲಿ ಗಾಯವಾಗಿದ್ದು, ಈ ಬಗ್ಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ  ನಡೆದ ಈ ಪ್ರಕರಣದ ಆರೋಪಿ ಬಂಧಿಸುವಲ್ಲಿ  ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

2 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

2 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

12 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

12 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

12 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

21 hours ago