Advertisement
ಸುದ್ದಿಗಳು

ಪುತ್ತೂರು ಜೋಡಿ ಕೊಲೆ ಪ್ರಕರಣ : 24 ಗಂಟೆಯಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

Share

ಪುತ್ತೂರು: ಪುತ್ತೂರು ತಾಲೂಕಿನ ಕುರಿಯ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು  24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆರೋಪಿಯು ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ ಕರೀಂ ಖಾನ್ ( 29 ವರ್ಷ).

ಕರೀಂ ಖಾನ್

ಆರೋಪಿ ಕರೀಂ ಖಾನ್ ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಶೇಕ್ ಕೊಗ್ಗು ಸಾಹೇಬ್ ಅವರ ಮನೆಗೆ ಕಳ್ಳತನದ ಉದ್ದೇಶದಿಂದ  ಮನೆಯ ಗೋಡೆ ಮತ್ತು ಹಂಚಿನ ನಡುವೆ ನುಸುಳಿ ಒಳ ಪ್ರವೇಶಿಸಿದ್ದು ಕಳ್ಳತನ ನಡೆಸುವ ವೇಳೆ ಮನೆಯ ಸದಸ್ಯರು ಎಚ್ಚರಗೊಂಡಿರುತ್ತಾರೆ ಹೀಗಾಗಿ ಮನೆಯ ಸದಸ್ಯರಿಗೆ ಪರಿಚಿತನಾಗಿದ್ದು ತಾನು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಭಯದಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ.ಆರೋಪಿ ಕರೀಂ ಖಾನ್ ಶೇಕ್ ಕೊಗ್ಗು ಸಾಹೇಬ್ ರವರೊಂದಿಗೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮನಸ್ತಾಪವನ್ನೂ ಹೊಂದಿದ್ದ ಎಂದೂ ಪೊಲೀಸರಲ್ಲಿ  ಬಾಯಿಬಿಟ್ಟಿದ್ದಾನೆ.

ಕಳ್ಳತನದ ವೇಳೆ ಮನೆಯವರಿಗೆ ಎಚ್ಚರವಾದ್ದು ತಿಳಿದು  ಅಡುಗೆ ಕೋಣೆಯಲ್ಲಿದ್ದ ಕೊಕ್ಕೆ ಕತ್ತಿಯಿಂದ ಮನೆಯಲ್ಲಿದ್ದ ಶೇಕ್ ಕೊಗ್ಗು ಸಾಹೇಬ್ ( 70 ವರ್ಷ), ಶಾಮಿಯಾ ಭಾನು (16 ವರ್ಷ) ಎಂಬವರುಗಳು ಹತ್ಯೆ ನಡೆಸಿದ್ದು, ಖತೀಜಾಬಿ (65 ವರ್ಷ) ಎಂಬವರಿಗೆ ಗಂಭೀರ ಹಲ್ಲೆ ನಡೆಸಿದ್ದ. ಬಳಿಕ ಮನೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,000 ರೂಪಾಯಿ ನಗದನ್ನು ಕಳ್ಳತನ ನಡೆಸಿ ಮನೆಯ ಹಿಂಬಾಗಿಲಿನ ಮೂಲಕ ತೆರಳಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸರು ಠಾಣಾ ವ್ಯಾಪ್ತಿಯ ಕುರಿಯ ಗ್ರಾಮದ ಬೀಟ್ ಸಿಬ್ಬಂದಿ ಭೀಮ್ ಶೇನ್ ರವರು ನೀಡಿದ ಸುಳಿವಿನ ಆಧಾರದಲ್ಲಿ ಆರೋಪಿಯನ್ನು ದಬಂಧಿಸಿದ್ದು ತನಿಖೆ ಪ್ರಗತಿಯಲ್ಲಿದೆ.ಆರೋಪಿಯ ಕೈಗೆ ಕೃತ್ಯ ನಡೆಸುವ ವೇಳೆ ಉಂಟಾದ ಘರ್ಷಣೆಯಲ್ಲಿ ಗಾಯವಾಗಿದ್ದು, ಈ ಬಗ್ಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ  ನಡೆದ ಈ ಪ್ರಕರಣದ ಆರೋಪಿ ಬಂಧಿಸುವಲ್ಲಿ  ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago