Advertisement
ಸುದ್ದಿಗಳು

ಪುತ್ತೂರು ಜೋಡಿ ಕೊಲೆ ಪ್ರಕರಣ : 24 ಗಂಟೆಯಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

Share

ಪುತ್ತೂರು: ಪುತ್ತೂರು ತಾಲೂಕಿನ ಕುರಿಯ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು  24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆರೋಪಿಯು ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ ಕರೀಂ ಖಾನ್ ( 29 ವರ್ಷ).

Advertisement
Advertisement
ಕರೀಂ ಖಾನ್

ಆರೋಪಿ ಕರೀಂ ಖಾನ್ ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಶೇಕ್ ಕೊಗ್ಗು ಸಾಹೇಬ್ ಅವರ ಮನೆಗೆ ಕಳ್ಳತನದ ಉದ್ದೇಶದಿಂದ  ಮನೆಯ ಗೋಡೆ ಮತ್ತು ಹಂಚಿನ ನಡುವೆ ನುಸುಳಿ ಒಳ ಪ್ರವೇಶಿಸಿದ್ದು ಕಳ್ಳತನ ನಡೆಸುವ ವೇಳೆ ಮನೆಯ ಸದಸ್ಯರು ಎಚ್ಚರಗೊಂಡಿರುತ್ತಾರೆ ಹೀಗಾಗಿ ಮನೆಯ ಸದಸ್ಯರಿಗೆ ಪರಿಚಿತನಾಗಿದ್ದು ತಾನು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಭಯದಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ.ಆರೋಪಿ ಕರೀಂ ಖಾನ್ ಶೇಕ್ ಕೊಗ್ಗು ಸಾಹೇಬ್ ರವರೊಂದಿಗೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮನಸ್ತಾಪವನ್ನೂ ಹೊಂದಿದ್ದ ಎಂದೂ ಪೊಲೀಸರಲ್ಲಿ  ಬಾಯಿಬಿಟ್ಟಿದ್ದಾನೆ.

Advertisement

ಕಳ್ಳತನದ ವೇಳೆ ಮನೆಯವರಿಗೆ ಎಚ್ಚರವಾದ್ದು ತಿಳಿದು  ಅಡುಗೆ ಕೋಣೆಯಲ್ಲಿದ್ದ ಕೊಕ್ಕೆ ಕತ್ತಿಯಿಂದ ಮನೆಯಲ್ಲಿದ್ದ ಶೇಕ್ ಕೊಗ್ಗು ಸಾಹೇಬ್ ( 70 ವರ್ಷ), ಶಾಮಿಯಾ ಭಾನು (16 ವರ್ಷ) ಎಂಬವರುಗಳು ಹತ್ಯೆ ನಡೆಸಿದ್ದು, ಖತೀಜಾಬಿ (65 ವರ್ಷ) ಎಂಬವರಿಗೆ ಗಂಭೀರ ಹಲ್ಲೆ ನಡೆಸಿದ್ದ. ಬಳಿಕ ಮನೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,000 ರೂಪಾಯಿ ನಗದನ್ನು ಕಳ್ಳತನ ನಡೆಸಿ ಮನೆಯ ಹಿಂಬಾಗಿಲಿನ ಮೂಲಕ ತೆರಳಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸರು ಠಾಣಾ ವ್ಯಾಪ್ತಿಯ ಕುರಿಯ ಗ್ರಾಮದ ಬೀಟ್ ಸಿಬ್ಬಂದಿ ಭೀಮ್ ಶೇನ್ ರವರು ನೀಡಿದ ಸುಳಿವಿನ ಆಧಾರದಲ್ಲಿ ಆರೋಪಿಯನ್ನು ದಬಂಧಿಸಿದ್ದು ತನಿಖೆ ಪ್ರಗತಿಯಲ್ಲಿದೆ.ಆರೋಪಿಯ ಕೈಗೆ ಕೃತ್ಯ ನಡೆಸುವ ವೇಳೆ ಉಂಟಾದ ಘರ್ಷಣೆಯಲ್ಲಿ ಗಾಯವಾಗಿದ್ದು, ಈ ಬಗ್ಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ  ನಡೆದ ಈ ಪ್ರಕರಣದ ಆರೋಪಿ ಬಂಧಿಸುವಲ್ಲಿ  ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

59 mins ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

1 hour ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

2 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

2 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

5 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

7 hours ago