Advertisement
ಸುದ್ದಿಗಳು

ಪುತ್ತೂರು: ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯ ಉದ್ಘಾಟನೆ

Share

ಪುತ್ತೂರು: ಅಣಕು ನ್ಯಾಯಾಲಯ ಸ್ಪರ್ಧೆಯು ಕಾನೂನು ವಿದ್ಯಾರ್ಥಿಗಳಿಗೆ, ವಕೀಲ ವೃತ್ತಿಯ ಅನುಭವವನ್ನು ಕೊಡುತ್ತದೆ. ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವೃತ್ತಿಜೀವನದ ಅನುಭವವನ್ನು ನೀಡುತ್ತದೆ ಎಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ನಟರಾಜ್ ಆರ್. ಹೇಳಿದರು.

ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವತಿಯಿಂದ ಫೆ.21ರಂದು ಜರುಗಿದ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಉಚ್ಛ ನ್ಯಾಯಾಲಯದ ನ್ಯಾಯವಾದಿಗಳಾದ ವಿವೇಕ್ ಸುಬ್ಬ ರೆಡ್ಡಿ ಮಾತನಾಡಿ, ವಕೀಲ ವೃತ್ತಿಗೆ ಕಾನೂನಿನ ಭಾಷೆ, ಸಮರ್ಪಣ ಮನೋಭಾವ ಮತ್ತು ಕಠಿಣ ಪರಿಶ್ರಮ ಅಗತ್ಯವಾಗಿದೆ. ಈ ಮೂರು ಅಂಶಗಳನ್ನು ಅಳವಡಿಸಿಕೊಂಡರೆ ವಕೀಲ ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.  ಮತ್ತೋರ್ವ ಅತಿಥಿಯಾದ, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ. ವಿ. ಮಾತನಾಡಿ, ವಕೀಲ ವೃತ್ತಿಯು ಈ ಕಾಲಘಟ್ಟದಲ್ಲಿ ಒಂದು ಉದ್ಯಮವಾಗಿ ಬದಲಾಗುತ್ತಿದೆ. ಆದರೆ ವಿದ್ಯಾರ್ಥಿಗಳು, ಮುಂದಿನ ವೃತ್ತಿಜೀವನದಲ್ಲಿ ಕೇವಲ ಹಣವನ್ನು ಸಂಪಾದಿಸುವುದರ ಕಡೆಗೆ ಗಮನಹರಿಸಬಾರದು. ಒಬ್ಬ ಒಳ್ಳೆಯ ವಕೀಲನಾಗುವತ್ತ ಗಮನಹರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಗಳಾದ ಕೃಷ್ಣ ಕುಮಾರ್ ಶೆಟ್ಟಿ ಮಾತನಾಡಿ, ವಿವೇಕಾನಂದ ವಿದ್ಯಾವರ್ಧಕ ಸಂಘವು ತನ್ನ ಹಲವಾರು ವಿದ್ಯಾ ಸಂಸ್ಥೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡುವುದರ ಜೊತೆಗೆ, ರಾಷ್ಟ್ರೀಯ ವಿಚಾರಗಳಿಗೆ ಮಹತ್ವವನ್ನು ನೀಡುತ್ತಿದೆ. ವಿವೇಕಾನಂದ ಕಾನೂನು ಕಾಲೇಜು ಈ ನಿಟ್ಟಿನಲ್ಲಿ ಹಲವು ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.
ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ವಿಜಯನಾರಾಯಣ ಕೆ. ಎಂ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ ಸ್ವಾಗತಿಸಿ, ಕಾಲೇಜಿನ ಪ್ರಾಂಶುಪಾಲರಾದ ಅಕ್ಷತಾ ಎ. ಪಿ. ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

12 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

12 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago