Advertisement
ಸುದ್ದಿಗಳು

ಪುತ್ತೂರು: ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯ ಉದ್ಘಾಟನೆ

Share

ಪುತ್ತೂರು: ಅಣಕು ನ್ಯಾಯಾಲಯ ಸ್ಪರ್ಧೆಯು ಕಾನೂನು ವಿದ್ಯಾರ್ಥಿಗಳಿಗೆ, ವಕೀಲ ವೃತ್ತಿಯ ಅನುಭವವನ್ನು ಕೊಡುತ್ತದೆ. ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವೃತ್ತಿಜೀವನದ ಅನುಭವವನ್ನು ನೀಡುತ್ತದೆ ಎಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ನಟರಾಜ್ ಆರ್. ಹೇಳಿದರು.

ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವತಿಯಿಂದ ಫೆ.21ರಂದು ಜರುಗಿದ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಉಚ್ಛ ನ್ಯಾಯಾಲಯದ ನ್ಯಾಯವಾದಿಗಳಾದ ವಿವೇಕ್ ಸುಬ್ಬ ರೆಡ್ಡಿ ಮಾತನಾಡಿ, ವಕೀಲ ವೃತ್ತಿಗೆ ಕಾನೂನಿನ ಭಾಷೆ, ಸಮರ್ಪಣ ಮನೋಭಾವ ಮತ್ತು ಕಠಿಣ ಪರಿಶ್ರಮ ಅಗತ್ಯವಾಗಿದೆ. ಈ ಮೂರು ಅಂಶಗಳನ್ನು ಅಳವಡಿಸಿಕೊಂಡರೆ ವಕೀಲ ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.  ಮತ್ತೋರ್ವ ಅತಿಥಿಯಾದ, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ. ವಿ. ಮಾತನಾಡಿ, ವಕೀಲ ವೃತ್ತಿಯು ಈ ಕಾಲಘಟ್ಟದಲ್ಲಿ ಒಂದು ಉದ್ಯಮವಾಗಿ ಬದಲಾಗುತ್ತಿದೆ. ಆದರೆ ವಿದ್ಯಾರ್ಥಿಗಳು, ಮುಂದಿನ ವೃತ್ತಿಜೀವನದಲ್ಲಿ ಕೇವಲ ಹಣವನ್ನು ಸಂಪಾದಿಸುವುದರ ಕಡೆಗೆ ಗಮನಹರಿಸಬಾರದು. ಒಬ್ಬ ಒಳ್ಳೆಯ ವಕೀಲನಾಗುವತ್ತ ಗಮನಹರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಗಳಾದ ಕೃಷ್ಣ ಕುಮಾರ್ ಶೆಟ್ಟಿ ಮಾತನಾಡಿ, ವಿವೇಕಾನಂದ ವಿದ್ಯಾವರ್ಧಕ ಸಂಘವು ತನ್ನ ಹಲವಾರು ವಿದ್ಯಾ ಸಂಸ್ಥೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡುವುದರ ಜೊತೆಗೆ, ರಾಷ್ಟ್ರೀಯ ವಿಚಾರಗಳಿಗೆ ಮಹತ್ವವನ್ನು ನೀಡುತ್ತಿದೆ. ವಿವೇಕಾನಂದ ಕಾನೂನು ಕಾಲೇಜು ಈ ನಿಟ್ಟಿನಲ್ಲಿ ಹಲವು ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.
ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ವಿಜಯನಾರಾಯಣ ಕೆ. ಎಂ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ ಸ್ವಾಗತಿಸಿ, ಕಾಲೇಜಿನ ಪ್ರಾಂಶುಪಾಲರಾದ ಅಕ್ಷತಾ ಎ. ಪಿ. ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

47 minutes ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

50 minutes ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

18 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago