Advertisement
ಸುದ್ದಿಗಳು

ಪುತ್ತೂರು: ವಿದ್ಯಾರ್ಥಿನಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ

Share

ಪುತ್ತೂರು: ಜೇಸಿಐ ಪುತ್ತೂರು – ತರಬೇತಿ ವಿಭಾಗ ಮತ್ತು ಸರಕಾರಿ ಮಹಿಳಾ ಪದವಿ ಕಾಲೇಜು ಪುತ್ತೂರು ಸಹಭಾಗಿತ್ವದಲ್ಲಿ ಫೆಬ್ರವರಿ 15 ರಿಂದ ಮಾರ್ಚ್ 6 ರವರಿಗೆ, ಕಾಲೇಜಿನ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಾಗಾರ ಆಯೋಜಿಸಲಾಯಿತು.

Advertisement

 

ಜೇಸಿಐ ಪುತ್ತೂರು ಹಾಗೂ ಜೇಸಿಐ ವಲಯ 15ರ ಹತ್ತು ತರಬೇತುದಾರರು, 15 ದಿನ, 30 ತರಬೇತಿ ನಡೆಸಿಕೊಟ್ಟರು. ಸುಮಾರು 220 ವಿದ್ಯಾರ್ಥಿನಿಯರು ತರಬೇತಿಯ ಪ್ರಯೋಜನ ಪಡೆದುಕೊಂಡರು. ಕಾರ್ಯಾಗಾರದ ಸಮಾರೋಪ ಸಮಾರಂಭ ಮತ್ತು ಪ್ರಮಾಣಪತ್ರ ವಿತರಣೆ ಮಾರ್ಚ್ 6 ರಂದು ರೋಟರಿ ಮನಿಷಾ ಹಾಲ್ ನಲ್ಲಿ ಮದ್ಯಾಹ್ನ 3 ಗಂಟೆಯಿಂದ ನಡೆಯಿತು. ಪುತ್ತೂರು ತಾಲೂಕು ಅಸಿಸ್ಟೆಂಟ್ ಕಮಿಷನರ್ ಡಾ. ಯತೀಶ್ ಉಲ್ಲಾಳ್ ಅವರು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು, ಭಾರತೀಯ ರೈಲ್ವೆ ಯಲ್ಲಿ ಸದ್ಯ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ ಶ್ರೀಮಾ ಪ್ರಿಯದರ್ಶಿನಿ ಹಾಗೂ ಸಂತ ಫಿಲೋಮಿನಾ ಕಾಲೇಜ್ ನ ಕನ್ನಡ ವಿಭಾಗ ಮುಖ್ಯಸ್ಥರಾದ ಜೇಸಿಐ ಪುತ್ತೂರು ಪೂರ್ವಧ್ಯಾಕ್ಷ ವಿಜಯ್ ಕುಮಾರ್ ಮೊಳೆಯಾರ್ ಅವರು ಆಹ್ವಾನಿತ ಅತಿಥಿಗಳಾಗಿ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದರು.

ಇಡೀ ಕಾರ್ಯಾಗಾರವನ್ನು ಜೇಸಿಐ ಪುತ್ತೂರು ಅಧ್ಯಕ್ಷ ವೇಣುಗೋಪಾಲ್, ಕಾರ್ಯಕ್ರಮ ನಿರ್ದೇಶಕರಾದ ರೇಷ್ಮಾ ಶೆಟ್ಟಿ, ಗೌರವ್ ಜತೆ ರಘು ಶೆಟ್ಟಿ ಮತ್ತು ಜೇಸಿಐ ಕಾರ್ಯದರ್ಶಿ ಪ್ರಮಿತಾ ಸುಧಾರಣೆ ಮಾಡಿದರು. ಜೇಸಿಐ ನ ಸುಭಾಷ್ ಬಂಗೇರ, ಕೃಷ್ಣಮೋಹ ನ್, ಪಶುಪತಿ ಶರ್ಮ, ದಾಮೋದರ ಪಾಟಾಳಿ, ಲತಾ ಯತೀಶ್, ಅಶ್ವಿನಿ ಕೃಷ್ಣ, ಶಾಮ್ ಮೂರ್ತಿ, ಉಮಾ ಪ್ರಸನ್ನ, ಅನೀಶ್, ನವೀನ್ ಕೊಯ್ಲ ತರಬೇತಿ ನಡೆಸಿ ಕೊಟ್ಟರು.
ಸಮಾರೋಪ ಕಾರ್ಯಕ್ರಮದಲ್ಲಿ ಜೇಸಿಐ ಪುತ್ತೂರು ತರಬೇತಿ ವಿಭಾಗದ ಶಶಿರಾಜ್, ನಿಕಟಪೂರ್ವ ಅಧ್ಯಕ್ಷ ಗೌತಮ್ ರೈ, ಪ್ರಜ್ವಲ್ ರೈ, ಸ್ವಾತಿ ಜೆ ರೈ, ಮೋಹನ್, ರುಕ್ಮಯ ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

1 day ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

1 day ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

2 days ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 days ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago