Advertisement
ಸುದ್ದಿಗಳು

ಪುತ್ತೂರು: ವಿದ್ಯಾರ್ಥಿನಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ

Share

ಪುತ್ತೂರು: ಜೇಸಿಐ ಪುತ್ತೂರು – ತರಬೇತಿ ವಿಭಾಗ ಮತ್ತು ಸರಕಾರಿ ಮಹಿಳಾ ಪದವಿ ಕಾಲೇಜು ಪುತ್ತೂರು ಸಹಭಾಗಿತ್ವದಲ್ಲಿ ಫೆಬ್ರವರಿ 15 ರಿಂದ ಮಾರ್ಚ್ 6 ರವರಿಗೆ, ಕಾಲೇಜಿನ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಾಗಾರ ಆಯೋಜಿಸಲಾಯಿತು.

 

ಜೇಸಿಐ ಪುತ್ತೂರು ಹಾಗೂ ಜೇಸಿಐ ವಲಯ 15ರ ಹತ್ತು ತರಬೇತುದಾರರು, 15 ದಿನ, 30 ತರಬೇತಿ ನಡೆಸಿಕೊಟ್ಟರು. ಸುಮಾರು 220 ವಿದ್ಯಾರ್ಥಿನಿಯರು ತರಬೇತಿಯ ಪ್ರಯೋಜನ ಪಡೆದುಕೊಂಡರು. ಕಾರ್ಯಾಗಾರದ ಸಮಾರೋಪ ಸಮಾರಂಭ ಮತ್ತು ಪ್ರಮಾಣಪತ್ರ ವಿತರಣೆ ಮಾರ್ಚ್ 6 ರಂದು ರೋಟರಿ ಮನಿಷಾ ಹಾಲ್ ನಲ್ಲಿ ಮದ್ಯಾಹ್ನ 3 ಗಂಟೆಯಿಂದ ನಡೆಯಿತು. ಪುತ್ತೂರು ತಾಲೂಕು ಅಸಿಸ್ಟೆಂಟ್ ಕಮಿಷನರ್ ಡಾ. ಯತೀಶ್ ಉಲ್ಲಾಳ್ ಅವರು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು, ಭಾರತೀಯ ರೈಲ್ವೆ ಯಲ್ಲಿ ಸದ್ಯ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ ಶ್ರೀಮಾ ಪ್ರಿಯದರ್ಶಿನಿ ಹಾಗೂ ಸಂತ ಫಿಲೋಮಿನಾ ಕಾಲೇಜ್ ನ ಕನ್ನಡ ವಿಭಾಗ ಮುಖ್ಯಸ್ಥರಾದ ಜೇಸಿಐ ಪುತ್ತೂರು ಪೂರ್ವಧ್ಯಾಕ್ಷ ವಿಜಯ್ ಕುಮಾರ್ ಮೊಳೆಯಾರ್ ಅವರು ಆಹ್ವಾನಿತ ಅತಿಥಿಗಳಾಗಿ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದರು.

ಇಡೀ ಕಾರ್ಯಾಗಾರವನ್ನು ಜೇಸಿಐ ಪುತ್ತೂರು ಅಧ್ಯಕ್ಷ ವೇಣುಗೋಪಾಲ್, ಕಾರ್ಯಕ್ರಮ ನಿರ್ದೇಶಕರಾದ ರೇಷ್ಮಾ ಶೆಟ್ಟಿ, ಗೌರವ್ ಜತೆ ರಘು ಶೆಟ್ಟಿ ಮತ್ತು ಜೇಸಿಐ ಕಾರ್ಯದರ್ಶಿ ಪ್ರಮಿತಾ ಸುಧಾರಣೆ ಮಾಡಿದರು. ಜೇಸಿಐ ನ ಸುಭಾಷ್ ಬಂಗೇರ, ಕೃಷ್ಣಮೋಹ ನ್, ಪಶುಪತಿ ಶರ್ಮ, ದಾಮೋದರ ಪಾಟಾಳಿ, ಲತಾ ಯತೀಶ್, ಅಶ್ವಿನಿ ಕೃಷ್ಣ, ಶಾಮ್ ಮೂರ್ತಿ, ಉಮಾ ಪ್ರಸನ್ನ, ಅನೀಶ್, ನವೀನ್ ಕೊಯ್ಲ ತರಬೇತಿ ನಡೆಸಿ ಕೊಟ್ಟರು.
ಸಮಾರೋಪ ಕಾರ್ಯಕ್ರಮದಲ್ಲಿ ಜೇಸಿಐ ಪುತ್ತೂರು ತರಬೇತಿ ವಿಭಾಗದ ಶಶಿರಾಜ್, ನಿಕಟಪೂರ್ವ ಅಧ್ಯಕ್ಷ ಗೌತಮ್ ರೈ, ಪ್ರಜ್ವಲ್ ರೈ, ಸ್ವಾತಿ ಜೆ ರೈ, ಮೋಹನ್, ರುಕ್ಮಯ ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!

ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…

4 minutes ago

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…

39 minutes ago

ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…

55 minutes ago

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.

1 hour ago

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…

4 hours ago

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…

17 hours ago