ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಜಾರಿಗೊಳಿಸಿದ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಗೇಟ್ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…