ಪುತ್ತೂರು: ಸಂಚಾರಿ ನಿಯಮಗಳ ಮಾಹಿತಿ ಅರಿವು

November 6, 2019
11:58 AM

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಪುತ್ತೂರು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಸಿಬ್ಬಂದಿ ವರ್ಗದವರಿಗೆ ಸಂಚಾರಿ ನಿಯಮಗಳ ಅಗತ್ಯತೆ, ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಶ್ರೀ ಕೃಷ್ಣ ನಾರಾಯಣ ಮುಳಿಯ ಅವರು ಈಗಿನ ವಾಸ್ತವದಲ್ಲಿ ಸಂಚಾರಿ ನಿಯಮಗಳ ಅರಿವು ಮತ್ತು ಪಾಲನೆ ಅತ್ಯಗತ್ಯವಾಗಿದ್ದು ಇದನ್ನು ಎಲ್ಲರೂ ಪಾಲಿಸುವಂತವರಾಗೋಣ ಎಂದರು.

ಪುತ್ತೂರು ಪೋಲಿಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಎಮ್.ವಿ. ಚೆಲುವಯ್ಯ ಅವರು ಸಂಚಾರಿ ನಿಯಮಗಳ ಮಾಹಿತಿ ನೀಡಿದರು. ನಿಯಮಗಳು ನಮ್ಮ ನಮ್ಮ ರಕ್ಷಣೆಯ ಅವಿಭಾಜ್ಯ ಅಂಗವಾಗಿದ್ದು, ನಾವು ನಮ್ಮ ಸುರಕ್ಷತೆಗಾಗಿ ಪಾಲಿಸಬೇಕಾಗಿದೆ. ಪೋಲಿಸರು ಹಿಡಿಯುತ್ತಾರೆ ಎಂದು ನಿಯಮ ಪಾಲಿಸುವುದರಲ್ಲಿ ತಿರುಳಿಲ್ಲ ಎಂದರು. ಅಲ್ಲದೆ ಈ ಮಾಹಿತಿಯನ್ನು ಇತರರಿಗೂ ತಿಳಿಸಿ. ಅವರಲ್ಲಿಯೂ ಅರಿವು ಮೂಡಿಸಿ ಎಂದು ಮನವಿ ಮಾಡಿದರು. ಸಂಸ್ಥೆಯ ಗುರುರಾಜ್ ಅವಭೃತರವರು ಸ್ವಾಗತಿಸಿದರು. ನಾಮ್‌ದೇವ್ ಮಲ್ಯ ಅವರು ವಂದಿಸಿದರು. ಪವಿತ್ರ. ಯು. ಅವರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror