ಪುತ್ತೂರು: ಸಂಚಾರಿ ನಿಯಮಗಳ ಮಾಹಿತಿ ಅರಿವು

November 6, 2019
11:58 AM

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಪುತ್ತೂರು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಸಿಬ್ಬಂದಿ ವರ್ಗದವರಿಗೆ ಸಂಚಾರಿ ನಿಯಮಗಳ ಅಗತ್ಯತೆ, ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಶ್ರೀ ಕೃಷ್ಣ ನಾರಾಯಣ ಮುಳಿಯ ಅವರು ಈಗಿನ ವಾಸ್ತವದಲ್ಲಿ ಸಂಚಾರಿ ನಿಯಮಗಳ ಅರಿವು ಮತ್ತು ಪಾಲನೆ ಅತ್ಯಗತ್ಯವಾಗಿದ್ದು ಇದನ್ನು ಎಲ್ಲರೂ ಪಾಲಿಸುವಂತವರಾಗೋಣ ಎಂದರು.

ಪುತ್ತೂರು ಪೋಲಿಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಎಮ್.ವಿ. ಚೆಲುವಯ್ಯ ಅವರು ಸಂಚಾರಿ ನಿಯಮಗಳ ಮಾಹಿತಿ ನೀಡಿದರು. ನಿಯಮಗಳು ನಮ್ಮ ನಮ್ಮ ರಕ್ಷಣೆಯ ಅವಿಭಾಜ್ಯ ಅಂಗವಾಗಿದ್ದು, ನಾವು ನಮ್ಮ ಸುರಕ್ಷತೆಗಾಗಿ ಪಾಲಿಸಬೇಕಾಗಿದೆ. ಪೋಲಿಸರು ಹಿಡಿಯುತ್ತಾರೆ ಎಂದು ನಿಯಮ ಪಾಲಿಸುವುದರಲ್ಲಿ ತಿರುಳಿಲ್ಲ ಎಂದರು. ಅಲ್ಲದೆ ಈ ಮಾಹಿತಿಯನ್ನು ಇತರರಿಗೂ ತಿಳಿಸಿ. ಅವರಲ್ಲಿಯೂ ಅರಿವು ಮೂಡಿಸಿ ಎಂದು ಮನವಿ ಮಾಡಿದರು. ಸಂಸ್ಥೆಯ ಗುರುರಾಜ್ ಅವಭೃತರವರು ಸ್ವಾಗತಿಸಿದರು. ನಾಮ್‌ದೇವ್ ಮಲ್ಯ ಅವರು ವಂದಿಸಿದರು. ಪವಿತ್ರ. ಯು. ಅವರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror