ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಪುತ್ತೂರು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಸಿಬ್ಬಂದಿ ವರ್ಗದವರಿಗೆ ಸಂಚಾರಿ ನಿಯಮಗಳ ಅಗತ್ಯತೆ, ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಶ್ರೀ ಕೃಷ್ಣ ನಾರಾಯಣ ಮುಳಿಯ ಅವರು ಈಗಿನ ವಾಸ್ತವದಲ್ಲಿ ಸಂಚಾರಿ ನಿಯಮಗಳ ಅರಿವು ಮತ್ತು ಪಾಲನೆ ಅತ್ಯಗತ್ಯವಾಗಿದ್ದು ಇದನ್ನು ಎಲ್ಲರೂ ಪಾಲಿಸುವಂತವರಾಗೋಣ ಎಂದರು.
ಪುತ್ತೂರು ಪೋಲಿಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಎಮ್.ವಿ. ಚೆಲುವಯ್ಯ ಅವರು ಸಂಚಾರಿ ನಿಯಮಗಳ ಮಾಹಿತಿ ನೀಡಿದರು. ನಿಯಮಗಳು ನಮ್ಮ ನಮ್ಮ ರಕ್ಷಣೆಯ ಅವಿಭಾಜ್ಯ ಅಂಗವಾಗಿದ್ದು, ನಾವು ನಮ್ಮ ಸುರಕ್ಷತೆಗಾಗಿ ಪಾಲಿಸಬೇಕಾಗಿದೆ. ಪೋಲಿಸರು ಹಿಡಿಯುತ್ತಾರೆ ಎಂದು ನಿಯಮ ಪಾಲಿಸುವುದರಲ್ಲಿ ತಿರುಳಿಲ್ಲ ಎಂದರು. ಅಲ್ಲದೆ ಈ ಮಾಹಿತಿಯನ್ನು ಇತರರಿಗೂ ತಿಳಿಸಿ. ಅವರಲ್ಲಿಯೂ ಅರಿವು ಮೂಡಿಸಿ ಎಂದು ಮನವಿ ಮಾಡಿದರು. ಸಂಸ್ಥೆಯ ಗುರುರಾಜ್ ಅವಭೃತರವರು ಸ್ವಾಗತಿಸಿದರು. ನಾಮ್ದೇವ್ ಮಲ್ಯ ಅವರು ವಂದಿಸಿದರು. ಪವಿತ್ರ. ಯು. ಅವರು ಕಾರ್ಯಕ್ರಮ ನಿರೂಪಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…