ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಪುತ್ತೂರು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಸಿಬ್ಬಂದಿ ವರ್ಗದವರಿಗೆ ಸಂಚಾರಿ ನಿಯಮಗಳ ಅಗತ್ಯತೆ, ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಶ್ರೀ ಕೃಷ್ಣ ನಾರಾಯಣ ಮುಳಿಯ ಅವರು ಈಗಿನ ವಾಸ್ತವದಲ್ಲಿ ಸಂಚಾರಿ ನಿಯಮಗಳ ಅರಿವು ಮತ್ತು ಪಾಲನೆ ಅತ್ಯಗತ್ಯವಾಗಿದ್ದು ಇದನ್ನು ಎಲ್ಲರೂ ಪಾಲಿಸುವಂತವರಾಗೋಣ ಎಂದರು.
ಪುತ್ತೂರು ಪೋಲಿಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಎಮ್.ವಿ. ಚೆಲುವಯ್ಯ ಅವರು ಸಂಚಾರಿ ನಿಯಮಗಳ ಮಾಹಿತಿ ನೀಡಿದರು. ನಿಯಮಗಳು ನಮ್ಮ ನಮ್ಮ ರಕ್ಷಣೆಯ ಅವಿಭಾಜ್ಯ ಅಂಗವಾಗಿದ್ದು, ನಾವು ನಮ್ಮ ಸುರಕ್ಷತೆಗಾಗಿ ಪಾಲಿಸಬೇಕಾಗಿದೆ. ಪೋಲಿಸರು ಹಿಡಿಯುತ್ತಾರೆ ಎಂದು ನಿಯಮ ಪಾಲಿಸುವುದರಲ್ಲಿ ತಿರುಳಿಲ್ಲ ಎಂದರು. ಅಲ್ಲದೆ ಈ ಮಾಹಿತಿಯನ್ನು ಇತರರಿಗೂ ತಿಳಿಸಿ. ಅವರಲ್ಲಿಯೂ ಅರಿವು ಮೂಡಿಸಿ ಎಂದು ಮನವಿ ಮಾಡಿದರು. ಸಂಸ್ಥೆಯ ಗುರುರಾಜ್ ಅವಭೃತರವರು ಸ್ವಾಗತಿಸಿದರು. ನಾಮ್ದೇವ್ ಮಲ್ಯ ಅವರು ವಂದಿಸಿದರು. ಪವಿತ್ರ. ಯು. ಅವರು ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…