ಪುತ್ತೂರು: ಸೊಳ್ಳೆಗಳಿಂದ ಹರಡುತ್ತಿರುವ ಡೆಂಘೆ ಸಹಿತ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ರಕ್ತ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುಂತೆ ಪುತ್ತೂರು ಸರಕಾ ರಿ ಆಸ್ಪತ್ರೆಯಲ್ಲಿ `ಕಾರ್ಡ್ಟೆಸ್ಟ್’ ವ್ಯವಸ್ಥೆಯನ್ನು ಆರಂಭಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ರಾಜ್ಯ ಆರೋಗ್ಯ ಇಲಾಖೆಯ ಕಮೀಷನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಡೆಂಘೆ ಜ್ವರದ ಕುರಿತ ಆರಂಭಿರ ರಕ್ತ ಪರೀಕ್ಷೆಯಾದ ಕಾರ್ಡ್ಟೆಸ್ಟ್ ವ್ಯವಸ್ಥೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ಕಾರಣ ಈ ಪರೀಕ್ಷೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಬೇಕಾಗಿದೆ. ಇದಕ್ಕಾಗಿ ರೂ. 680 ಖರ್ಚಾಗಲಿದ್ದು ಇದರಿಂದ ಬಡ ರೋಗಿಗಳಿಗೆ ಆರ್ಥಿಕ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಡ್ಟೆಸ್ಟ್ ಪರೀಕ್ಷೆಗೆ ವ್ಯವಸ್ಥೆಗೊಳಿಸುವಂತೆ ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…