Advertisement
ಸುದ್ದಿಗಳು

ಪುತ್ತೂರು ಹಣ್ಣು ಮೇಳ-2020 ಪ್ರಾತ್ಯಕ್ಷಿಕೆಗಳ ತಯಾರಿ ಉದ್ಘಾಟನೆ

Share

ಪುತ್ತೂರು:ಕರಾವಳಿಯಲ್ಲಿ ಆಹಾರ ಬೆಳೆಯತ್ತ ಗಮನಹರಿಸಬೇಕಾದ ಅಗತ್ಯವಿದೆ. ತರಕಾರಿ ಹಾಗೂ ಹಣ್ಣುಗಳ‌ ಸ್ವಾವಲಂಬನೆ ಬೇಕಿದೆ. ಈ ನೆಲೆಯಲ್ಲಿ ಕೃಷಿಕರನ್ನು ಜಾಗೃತಿಗೊಳಿಸುವ ಕಾರ್ಯಬೇಕಿದೆ. ಇದರ ಜೊತೆಗೆ ಮಾರುಕಟ್ಟೆಯ ಕಡೆಗೂ‌ ಗಮನಹರಿಸಬೇಕಾದ ಅಗತ್ಯವಿದೆ ಎಂದು ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೊಂಕೋಡಿ ಹೇಳಿದರು.

ಅವರು ಶನಿವಾರದಂದು ಪುತ್ತೂರು ಸುದಾನ ವಸತಿಯುತ ಶಾಲಾ ವಠಾರದಲ್ಲಿ ಕರ್ನಾಟಕ ಸರಕಾರ, ಐ ಐ ಎಚ್ ಆರ್, ತೋಟಗಾರಿಕಾ ಇಲಾಖೆ, ನವತೇಜ‌ಟ್ರಸ್ಟ್, ಪುತ್ತೂರು ಜೇಸಿಐ ಹಾಗೂ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಮೇ 23 ರಿಂದ 25 ರವರೆಗೆ ನಡೆಯುವ ಹಣ್ಣು ಮೇಳದಲ್ಲಿ ಕರಾವಳಿಯಲ್ಲಿ ಬೆಳೆಯುವ ವಿವಿಧ ತರಕಾರಿ ಬೆಳೆ ಹಾಗೂ ಹೂವು ಬೆಳೆಯ ಪ್ರಾತ್ಯಕ್ಷಿಕೆಗೆ ತರಕಾರಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಅತಿಥಿಯಾಗಿದ್ದ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ, ಸುದಾನ ಶಾಲಾ ಕಾರ್ಯದರ್ಶಿ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ‌ ಹಿಂದೆ ಗ್ರಾಮ‌ಸ್ವಾವಲಂಬೆಯಲ್ಲಿ ಇತ್ತು. ‌ತರಕಾರಿಯಿಂದ ತೊಡಗಿ ಭತ್ತದವರೆಗೆ ಎಲ್ಲವನ್ನೂ ಕೃಷಿಕರು ಬೆಳೆಯುತ್ತಿದ್ದರು, ಇದರಿಂದ ಆರೋಗ್ಯವೂ ಉತ್ತಮವಾಗಿತ್ತು.ಈಗ ಕಾಲ ಬದಲಾಗಿದೆ, ಈಗ ಆರೋಗ್ಯವೂ ಹದಗೆಡುತ್ತಿರುವುದಕ್ಕೆ ಸ್ವಾವಲಂಬನೆಯಿಂದ ಹೊರಬಂದಿರುವುದೇ ಕಾರಣವಾಗಿದೆ. ಈ ಸಂದರ್ಭದಲ್ಲಿ ಮತ್ತೆ ತರಕಾರಿ,ಹಣ್ಣು ಬೆಳೆಯುವ ಮೂಲಕ ಸ್ವಾವಲಂಬನೆಯತ್ತ, ಆರೋಗ್ಯವಂತ ಬದುಕಿನತ್ತ ಸಾಗಬೇಕಿದೆ ಎಂದರು.

ಪ್ರಸ್ತಾವನೆಗೈದ ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ, ಮೇ ತಿಂಗಳ ಅಂತ್ಯದಲ್ಲಿ ನಡೆಯುವ ತೋಟಗಾರಿಕಾ ಬೆಳೆಗಳ ಮೇಳಕ್ಕೆ ಸಮಸ್ತ ಜನರ ಹಾಗೂ ವಿಶೇಷವಾಗಿ ಕೃಷಿಕರ ಸಹಕಾರ ಅಗತ್ಯವಿದೆ ಎಂದರು. ಪ್ರಾತ್ಯಕ್ಷಿಕೆಯಲ್ಲಿ ಸುಮಾರು‌30 ಬಗೆಯ ತರಕಾರಿ ಬೆಳೆ , ಹೂವು ಕೃಷಿಯ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದರು.

ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಸ್ವಾಗತಿಸಿ ಪ್ರಸ್ತಾವನೆಗೈದರು. ಪುತ್ತೂರು ಹಣ್ಣುಮೇಳ ಕಾರ್ಯಕ್ರಮ ನಿರ್ದೇಶಕ ಪ್ರಜ್ವಲ್ ರೈ ವಂದಿಸಿದರು. ನವತೇಜ ಟ್ರಸ್ಟ್ ಕಾರ್ಯದರ್ಶಿ ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

22 minutes ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

2 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

2 hours ago

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

3 hours ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

8 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

16 hours ago