Advertisement
ಸುದ್ದಿಗಳು

ಪುತ್ತೂರು ಹಣ್ಣು ಮೇಳ-2020 ಪ್ರಾತ್ಯಕ್ಷಿಕೆಗಳ ತಯಾರಿ ಉದ್ಘಾಟನೆ

Share

ಪುತ್ತೂರು:ಕರಾವಳಿಯಲ್ಲಿ ಆಹಾರ ಬೆಳೆಯತ್ತ ಗಮನಹರಿಸಬೇಕಾದ ಅಗತ್ಯವಿದೆ. ತರಕಾರಿ ಹಾಗೂ ಹಣ್ಣುಗಳ‌ ಸ್ವಾವಲಂಬನೆ ಬೇಕಿದೆ. ಈ ನೆಲೆಯಲ್ಲಿ ಕೃಷಿಕರನ್ನು ಜಾಗೃತಿಗೊಳಿಸುವ ಕಾರ್ಯಬೇಕಿದೆ. ಇದರ ಜೊತೆಗೆ ಮಾರುಕಟ್ಟೆಯ ಕಡೆಗೂ‌ ಗಮನಹರಿಸಬೇಕಾದ ಅಗತ್ಯವಿದೆ ಎಂದು ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೊಂಕೋಡಿ ಹೇಳಿದರು.

ಅವರು ಶನಿವಾರದಂದು ಪುತ್ತೂರು ಸುದಾನ ವಸತಿಯುತ ಶಾಲಾ ವಠಾರದಲ್ಲಿ ಕರ್ನಾಟಕ ಸರಕಾರ, ಐ ಐ ಎಚ್ ಆರ್, ತೋಟಗಾರಿಕಾ ಇಲಾಖೆ, ನವತೇಜ‌ಟ್ರಸ್ಟ್, ಪುತ್ತೂರು ಜೇಸಿಐ ಹಾಗೂ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಮೇ 23 ರಿಂದ 25 ರವರೆಗೆ ನಡೆಯುವ ಹಣ್ಣು ಮೇಳದಲ್ಲಿ ಕರಾವಳಿಯಲ್ಲಿ ಬೆಳೆಯುವ ವಿವಿಧ ತರಕಾರಿ ಬೆಳೆ ಹಾಗೂ ಹೂವು ಬೆಳೆಯ ಪ್ರಾತ್ಯಕ್ಷಿಕೆಗೆ ತರಕಾರಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಅತಿಥಿಯಾಗಿದ್ದ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ, ಸುದಾನ ಶಾಲಾ ಕಾರ್ಯದರ್ಶಿ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ‌ ಹಿಂದೆ ಗ್ರಾಮ‌ಸ್ವಾವಲಂಬೆಯಲ್ಲಿ ಇತ್ತು. ‌ತರಕಾರಿಯಿಂದ ತೊಡಗಿ ಭತ್ತದವರೆಗೆ ಎಲ್ಲವನ್ನೂ ಕೃಷಿಕರು ಬೆಳೆಯುತ್ತಿದ್ದರು, ಇದರಿಂದ ಆರೋಗ್ಯವೂ ಉತ್ತಮವಾಗಿತ್ತು.ಈಗ ಕಾಲ ಬದಲಾಗಿದೆ, ಈಗ ಆರೋಗ್ಯವೂ ಹದಗೆಡುತ್ತಿರುವುದಕ್ಕೆ ಸ್ವಾವಲಂಬನೆಯಿಂದ ಹೊರಬಂದಿರುವುದೇ ಕಾರಣವಾಗಿದೆ. ಈ ಸಂದರ್ಭದಲ್ಲಿ ಮತ್ತೆ ತರಕಾರಿ,ಹಣ್ಣು ಬೆಳೆಯುವ ಮೂಲಕ ಸ್ವಾವಲಂಬನೆಯತ್ತ, ಆರೋಗ್ಯವಂತ ಬದುಕಿನತ್ತ ಸಾಗಬೇಕಿದೆ ಎಂದರು.

ಪ್ರಸ್ತಾವನೆಗೈದ ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ, ಮೇ ತಿಂಗಳ ಅಂತ್ಯದಲ್ಲಿ ನಡೆಯುವ ತೋಟಗಾರಿಕಾ ಬೆಳೆಗಳ ಮೇಳಕ್ಕೆ ಸಮಸ್ತ ಜನರ ಹಾಗೂ ವಿಶೇಷವಾಗಿ ಕೃಷಿಕರ ಸಹಕಾರ ಅಗತ್ಯವಿದೆ ಎಂದರು. ಪ್ರಾತ್ಯಕ್ಷಿಕೆಯಲ್ಲಿ ಸುಮಾರು‌30 ಬಗೆಯ ತರಕಾರಿ ಬೆಳೆ , ಹೂವು ಕೃಷಿಯ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದರು.

ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಸ್ವಾಗತಿಸಿ ಪ್ರಸ್ತಾವನೆಗೈದರು. ಪುತ್ತೂರು ಹಣ್ಣುಮೇಳ ಕಾರ್ಯಕ್ರಮ ನಿರ್ದೇಶಕ ಪ್ರಜ್ವಲ್ ರೈ ವಂದಿಸಿದರು. ನವತೇಜ ಟ್ರಸ್ಟ್ ಕಾರ್ಯದರ್ಶಿ ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

13 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

20 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

1 day ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago