Advertisement
ಸುದ್ದಿಗಳು

ಪುತ್ತೂರು ಹಣ್ಣು ಮೇಳ-2020 ಪ್ರಾತ್ಯಕ್ಷಿಕೆಗಳ ತಯಾರಿ ಉದ್ಘಾಟನೆ

Share

ಪುತ್ತೂರು:ಕರಾವಳಿಯಲ್ಲಿ ಆಹಾರ ಬೆಳೆಯತ್ತ ಗಮನಹರಿಸಬೇಕಾದ ಅಗತ್ಯವಿದೆ. ತರಕಾರಿ ಹಾಗೂ ಹಣ್ಣುಗಳ‌ ಸ್ವಾವಲಂಬನೆ ಬೇಕಿದೆ. ಈ ನೆಲೆಯಲ್ಲಿ ಕೃಷಿಕರನ್ನು ಜಾಗೃತಿಗೊಳಿಸುವ ಕಾರ್ಯಬೇಕಿದೆ. ಇದರ ಜೊತೆಗೆ ಮಾರುಕಟ್ಟೆಯ ಕಡೆಗೂ‌ ಗಮನಹರಿಸಬೇಕಾದ ಅಗತ್ಯವಿದೆ ಎಂದು ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೊಂಕೋಡಿ ಹೇಳಿದರು.

ಅವರು ಶನಿವಾರದಂದು ಪುತ್ತೂರು ಸುದಾನ ವಸತಿಯುತ ಶಾಲಾ ವಠಾರದಲ್ಲಿ ಕರ್ನಾಟಕ ಸರಕಾರ, ಐ ಐ ಎಚ್ ಆರ್, ತೋಟಗಾರಿಕಾ ಇಲಾಖೆ, ನವತೇಜ‌ಟ್ರಸ್ಟ್, ಪುತ್ತೂರು ಜೇಸಿಐ ಹಾಗೂ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಮೇ 23 ರಿಂದ 25 ರವರೆಗೆ ನಡೆಯುವ ಹಣ್ಣು ಮೇಳದಲ್ಲಿ ಕರಾವಳಿಯಲ್ಲಿ ಬೆಳೆಯುವ ವಿವಿಧ ತರಕಾರಿ ಬೆಳೆ ಹಾಗೂ ಹೂವು ಬೆಳೆಯ ಪ್ರಾತ್ಯಕ್ಷಿಕೆಗೆ ತರಕಾರಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಅತಿಥಿಯಾಗಿದ್ದ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ, ಸುದಾನ ಶಾಲಾ ಕಾರ್ಯದರ್ಶಿ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ‌ ಹಿಂದೆ ಗ್ರಾಮ‌ಸ್ವಾವಲಂಬೆಯಲ್ಲಿ ಇತ್ತು. ‌ತರಕಾರಿಯಿಂದ ತೊಡಗಿ ಭತ್ತದವರೆಗೆ ಎಲ್ಲವನ್ನೂ ಕೃಷಿಕರು ಬೆಳೆಯುತ್ತಿದ್ದರು, ಇದರಿಂದ ಆರೋಗ್ಯವೂ ಉತ್ತಮವಾಗಿತ್ತು.ಈಗ ಕಾಲ ಬದಲಾಗಿದೆ, ಈಗ ಆರೋಗ್ಯವೂ ಹದಗೆಡುತ್ತಿರುವುದಕ್ಕೆ ಸ್ವಾವಲಂಬನೆಯಿಂದ ಹೊರಬಂದಿರುವುದೇ ಕಾರಣವಾಗಿದೆ. ಈ ಸಂದರ್ಭದಲ್ಲಿ ಮತ್ತೆ ತರಕಾರಿ,ಹಣ್ಣು ಬೆಳೆಯುವ ಮೂಲಕ ಸ್ವಾವಲಂಬನೆಯತ್ತ, ಆರೋಗ್ಯವಂತ ಬದುಕಿನತ್ತ ಸಾಗಬೇಕಿದೆ ಎಂದರು.

ಪ್ರಸ್ತಾವನೆಗೈದ ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ, ಮೇ ತಿಂಗಳ ಅಂತ್ಯದಲ್ಲಿ ನಡೆಯುವ ತೋಟಗಾರಿಕಾ ಬೆಳೆಗಳ ಮೇಳಕ್ಕೆ ಸಮಸ್ತ ಜನರ ಹಾಗೂ ವಿಶೇಷವಾಗಿ ಕೃಷಿಕರ ಸಹಕಾರ ಅಗತ್ಯವಿದೆ ಎಂದರು. ಪ್ರಾತ್ಯಕ್ಷಿಕೆಯಲ್ಲಿ ಸುಮಾರು‌30 ಬಗೆಯ ತರಕಾರಿ ಬೆಳೆ , ಹೂವು ಕೃಷಿಯ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದರು.

ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಸ್ವಾಗತಿಸಿ ಪ್ರಸ್ತಾವನೆಗೈದರು. ಪುತ್ತೂರು ಹಣ್ಣುಮೇಳ ಕಾರ್ಯಕ್ರಮ ನಿರ್ದೇಶಕ ಪ್ರಜ್ವಲ್ ರೈ ವಂದಿಸಿದರು. ನವತೇಜ ಟ್ರಸ್ಟ್ ಕಾರ್ಯದರ್ಶಿ ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

13 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

13 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

14 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

22 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

22 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

2 days ago