Advertisement
ಸುದ್ದಿಗಳು

ಪುತ್ತೂರು ಹಣ್ಣು ಮೇಳ-2020 ಪ್ರಾತ್ಯಕ್ಷಿಕೆಗಳ ತಯಾರಿ ಉದ್ಘಾಟನೆ

Share

ಪುತ್ತೂರು:ಕರಾವಳಿಯಲ್ಲಿ ಆಹಾರ ಬೆಳೆಯತ್ತ ಗಮನಹರಿಸಬೇಕಾದ ಅಗತ್ಯವಿದೆ. ತರಕಾರಿ ಹಾಗೂ ಹಣ್ಣುಗಳ‌ ಸ್ವಾವಲಂಬನೆ ಬೇಕಿದೆ. ಈ ನೆಲೆಯಲ್ಲಿ ಕೃಷಿಕರನ್ನು ಜಾಗೃತಿಗೊಳಿಸುವ ಕಾರ್ಯಬೇಕಿದೆ. ಇದರ ಜೊತೆಗೆ ಮಾರುಕಟ್ಟೆಯ ಕಡೆಗೂ‌ ಗಮನಹರಿಸಬೇಕಾದ ಅಗತ್ಯವಿದೆ ಎಂದು ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೊಂಕೋಡಿ ಹೇಳಿದರು.

ಅವರು ಶನಿವಾರದಂದು ಪುತ್ತೂರು ಸುದಾನ ವಸತಿಯುತ ಶಾಲಾ ವಠಾರದಲ್ಲಿ ಕರ್ನಾಟಕ ಸರಕಾರ, ಐ ಐ ಎಚ್ ಆರ್, ತೋಟಗಾರಿಕಾ ಇಲಾಖೆ, ನವತೇಜ‌ಟ್ರಸ್ಟ್, ಪುತ್ತೂರು ಜೇಸಿಐ ಹಾಗೂ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಮೇ 23 ರಿಂದ 25 ರವರೆಗೆ ನಡೆಯುವ ಹಣ್ಣು ಮೇಳದಲ್ಲಿ ಕರಾವಳಿಯಲ್ಲಿ ಬೆಳೆಯುವ ವಿವಿಧ ತರಕಾರಿ ಬೆಳೆ ಹಾಗೂ ಹೂವು ಬೆಳೆಯ ಪ್ರಾತ್ಯಕ್ಷಿಕೆಗೆ ತರಕಾರಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಅತಿಥಿಯಾಗಿದ್ದ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ, ಸುದಾನ ಶಾಲಾ ಕಾರ್ಯದರ್ಶಿ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ‌ ಹಿಂದೆ ಗ್ರಾಮ‌ಸ್ವಾವಲಂಬೆಯಲ್ಲಿ ಇತ್ತು. ‌ತರಕಾರಿಯಿಂದ ತೊಡಗಿ ಭತ್ತದವರೆಗೆ ಎಲ್ಲವನ್ನೂ ಕೃಷಿಕರು ಬೆಳೆಯುತ್ತಿದ್ದರು, ಇದರಿಂದ ಆರೋಗ್ಯವೂ ಉತ್ತಮವಾಗಿತ್ತು.ಈಗ ಕಾಲ ಬದಲಾಗಿದೆ, ಈಗ ಆರೋಗ್ಯವೂ ಹದಗೆಡುತ್ತಿರುವುದಕ್ಕೆ ಸ್ವಾವಲಂಬನೆಯಿಂದ ಹೊರಬಂದಿರುವುದೇ ಕಾರಣವಾಗಿದೆ. ಈ ಸಂದರ್ಭದಲ್ಲಿ ಮತ್ತೆ ತರಕಾರಿ,ಹಣ್ಣು ಬೆಳೆಯುವ ಮೂಲಕ ಸ್ವಾವಲಂಬನೆಯತ್ತ, ಆರೋಗ್ಯವಂತ ಬದುಕಿನತ್ತ ಸಾಗಬೇಕಿದೆ ಎಂದರು.

ಪ್ರಸ್ತಾವನೆಗೈದ ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ, ಮೇ ತಿಂಗಳ ಅಂತ್ಯದಲ್ಲಿ ನಡೆಯುವ ತೋಟಗಾರಿಕಾ ಬೆಳೆಗಳ ಮೇಳಕ್ಕೆ ಸಮಸ್ತ ಜನರ ಹಾಗೂ ವಿಶೇಷವಾಗಿ ಕೃಷಿಕರ ಸಹಕಾರ ಅಗತ್ಯವಿದೆ ಎಂದರು. ಪ್ರಾತ್ಯಕ್ಷಿಕೆಯಲ್ಲಿ ಸುಮಾರು‌30 ಬಗೆಯ ತರಕಾರಿ ಬೆಳೆ , ಹೂವು ಕೃಷಿಯ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದರು.

ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಸ್ವಾಗತಿಸಿ ಪ್ರಸ್ತಾವನೆಗೈದರು. ಪುತ್ತೂರು ಹಣ್ಣುಮೇಳ ಕಾರ್ಯಕ್ರಮ ನಿರ್ದೇಶಕ ಪ್ರಜ್ವಲ್ ರೈ ವಂದಿಸಿದರು. ನವತೇಜ ಟ್ರಸ್ಟ್ ಕಾರ್ಯದರ್ಶಿ ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

12 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

12 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

20 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago