Advertisement
ಸುದ್ದಿಗಳು

ಪುತ್ರಿಯನ್ನು ಅಂಗನವಾಡಿಗೆ ದಾಖಲಿಸಿ ಮಾದರಿಯಾದ ಮಡಿಕೇರಿ ಎಸ್‍ಪಿ ಡಾ.ಸುಮನ್

Share

ಮಡಿಕೇರಿ :ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಮ್ಮ ಮಗುವನ್ನು ಸರಕಾರಿ ಅಂಗನವಾಡಿಗೆ ದಾಖಲಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

Advertisement
Advertisement

ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಕೂಡ ಪ್ರತಿಷ್ಠೆಯನ್ನಾಗಿ ಪರಿಗಣಿಸುತ್ತಿರುವ ಇಂದಿನ ಪೋಷಕರು ಮಕ್ಕಳು ಜನಿಸುತ್ತಲೇ ಇಂಗ್ಲೀಷ್ ಪದ ಪ್ರಯೋಗಗಳನ್ನು ಆರಂಭಿಸುತ್ತಾರೆ. ಬೇಬಿ ಸಿಟ್ಟಿಂಗ್, ಎಲ್‍ಕೆಜಿ, ಯುಕೆಜಿ ತರಗತಿಗಳಿಗಾಗಿ ವರ್ಷಗಟ್ಟಲೆ ಕಾದು ಸೀಟು ಗಿಟ್ಟಿಸಿಕೊಳ್ಳುವ ರಿಸ್ಕ್ ಕೂಡ ಪೋಷಕರ ಮೇಲಿದೆ. ಆದರೆ ಯಾವುದೇ ಪೈಪೋಟಿಗಳಿಲ್ಲದೆ ಸುಲಭ ಮಾರ್ಗ ತೋರುವ ಅಂಗನವಾಡಿಗಳು ಕಾಲ ಬುಡದಲ್ಲಿದ್ದರೂ ಅವುಗಳ ಬಗ್ಗೆ ಕನ್ನಡ ಪೋಷಕರಿಗೆ ತಾತ್ಸಾರವೇ ಹೆಚ್ಚು. ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳಂತೂ ತಮ್ಮ ಮಕ್ಕಳನ್ನು ಸರಕಾರಿ ಶಾಲೆಯ ಕಡೆಗೆ ತಿರುಗಿಯೂ ನೋಡದಂತೆ ಮಾಡುತ್ತಾರೆ ಎನ್ನುವ ಅಪವಾದವಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೊಡಗು ಎಸ್‍ಪಿ ಸುಮನ್ ಡಿ.ಪನ್ನೇಕರ್ ಅವರು ತಮ್ಮ ಎರಡೂವರೆ ವರ್ಷದ ಪುತ್ರಿ ಖುಷಿಯನ್ನು ಫೀ.ಮಾ.ಕಾರ್ಯಪ್ಪ ಕಾಲೇಜು ಸಮೀಪದ ಅಂಗನವಾಡಿಗೆ ದಾಖಲಿಸಿದ್ದಾರೆ.

ಮಕ್ಕಳಿಗೆ ಬಾಲ್ಯದಿಂದಲೇ ನೈತಿಕತೆ ಮತ್ತು ಮೌಲ್ಯಗಳ ಪಾಠ ಅಗತ್ಯವೆನ್ನುವ ಕಾರಣಕ್ಕಾಗಿ “ಖುಷಿ”ಗೆ ಅಂಗನವಾಡಿ ಮೂಲಕವೇ ಮೊದಲ ಪಾಠ ಆರಂಭಿಸುತ್ತಿರುವುದಾಗಿ ಎಸ್‍ಪಿ ತಿಳಿಸಿದ್ದಾರೆ. ಸ್ಥಳೀಯ ಅಂಗನವಾಡಿ ವ್ಯವಸ್ಥೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಅಂಗನವಾಡಿಯ ಇತರ ಮಕ್ಕಳು “ಖುಷಿ”ಯೊಂದಿಗೆ ಖುಷಿ, ಖುಷಿಯಾಗಿ ದಿನ ಕಳೆಯುತ್ತಿರುವುದು ವಿಶೇಷ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago