Advertisement
ಸುದ್ದಿಗಳು

ಪುತ್ರಿಯನ್ನು ಅಂಗನವಾಡಿಗೆ ದಾಖಲಿಸಿ ಮಾದರಿಯಾದ ಮಡಿಕೇರಿ ಎಸ್‍ಪಿ ಡಾ.ಸುಮನ್

Share

ಮಡಿಕೇರಿ :ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಮ್ಮ ಮಗುವನ್ನು ಸರಕಾರಿ ಅಂಗನವಾಡಿಗೆ ದಾಖಲಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

Advertisement
Advertisement

ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಕೂಡ ಪ್ರತಿಷ್ಠೆಯನ್ನಾಗಿ ಪರಿಗಣಿಸುತ್ತಿರುವ ಇಂದಿನ ಪೋಷಕರು ಮಕ್ಕಳು ಜನಿಸುತ್ತಲೇ ಇಂಗ್ಲೀಷ್ ಪದ ಪ್ರಯೋಗಗಳನ್ನು ಆರಂಭಿಸುತ್ತಾರೆ. ಬೇಬಿ ಸಿಟ್ಟಿಂಗ್, ಎಲ್‍ಕೆಜಿ, ಯುಕೆಜಿ ತರಗತಿಗಳಿಗಾಗಿ ವರ್ಷಗಟ್ಟಲೆ ಕಾದು ಸೀಟು ಗಿಟ್ಟಿಸಿಕೊಳ್ಳುವ ರಿಸ್ಕ್ ಕೂಡ ಪೋಷಕರ ಮೇಲಿದೆ. ಆದರೆ ಯಾವುದೇ ಪೈಪೋಟಿಗಳಿಲ್ಲದೆ ಸುಲಭ ಮಾರ್ಗ ತೋರುವ ಅಂಗನವಾಡಿಗಳು ಕಾಲ ಬುಡದಲ್ಲಿದ್ದರೂ ಅವುಗಳ ಬಗ್ಗೆ ಕನ್ನಡ ಪೋಷಕರಿಗೆ ತಾತ್ಸಾರವೇ ಹೆಚ್ಚು. ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳಂತೂ ತಮ್ಮ ಮಕ್ಕಳನ್ನು ಸರಕಾರಿ ಶಾಲೆಯ ಕಡೆಗೆ ತಿರುಗಿಯೂ ನೋಡದಂತೆ ಮಾಡುತ್ತಾರೆ ಎನ್ನುವ ಅಪವಾದವಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೊಡಗು ಎಸ್‍ಪಿ ಸುಮನ್ ಡಿ.ಪನ್ನೇಕರ್ ಅವರು ತಮ್ಮ ಎರಡೂವರೆ ವರ್ಷದ ಪುತ್ರಿ ಖುಷಿಯನ್ನು ಫೀ.ಮಾ.ಕಾರ್ಯಪ್ಪ ಕಾಲೇಜು ಸಮೀಪದ ಅಂಗನವಾಡಿಗೆ ದಾಖಲಿಸಿದ್ದಾರೆ.

Advertisement

ಮಕ್ಕಳಿಗೆ ಬಾಲ್ಯದಿಂದಲೇ ನೈತಿಕತೆ ಮತ್ತು ಮೌಲ್ಯಗಳ ಪಾಠ ಅಗತ್ಯವೆನ್ನುವ ಕಾರಣಕ್ಕಾಗಿ “ಖುಷಿ”ಗೆ ಅಂಗನವಾಡಿ ಮೂಲಕವೇ ಮೊದಲ ಪಾಠ ಆರಂಭಿಸುತ್ತಿರುವುದಾಗಿ ಎಸ್‍ಪಿ ತಿಳಿಸಿದ್ದಾರೆ. ಸ್ಥಳೀಯ ಅಂಗನವಾಡಿ ವ್ಯವಸ್ಥೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಅಂಗನವಾಡಿಯ ಇತರ ಮಕ್ಕಳು “ಖುಷಿ”ಯೊಂದಿಗೆ ಖುಷಿ, ಖುಷಿಯಾಗಿ ದಿನ ಕಳೆಯುತ್ತಿರುವುದು ವಿಶೇಷ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

15 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 day ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

3 days ago