Advertisement
ಸುದ್ದಿಗಳು

ಪುತ್ರಿಯನ್ನು ಅಂಗನವಾಡಿಗೆ ದಾಖಲಿಸಿ ಮಾದರಿಯಾದ ಮಡಿಕೇರಿ ಎಸ್‍ಪಿ ಡಾ.ಸುಮನ್

Share

ಮಡಿಕೇರಿ :ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಮ್ಮ ಮಗುವನ್ನು ಸರಕಾರಿ ಅಂಗನವಾಡಿಗೆ ದಾಖಲಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಕೂಡ ಪ್ರತಿಷ್ಠೆಯನ್ನಾಗಿ ಪರಿಗಣಿಸುತ್ತಿರುವ ಇಂದಿನ ಪೋಷಕರು ಮಕ್ಕಳು ಜನಿಸುತ್ತಲೇ ಇಂಗ್ಲೀಷ್ ಪದ ಪ್ರಯೋಗಗಳನ್ನು ಆರಂಭಿಸುತ್ತಾರೆ. ಬೇಬಿ ಸಿಟ್ಟಿಂಗ್, ಎಲ್‍ಕೆಜಿ, ಯುಕೆಜಿ ತರಗತಿಗಳಿಗಾಗಿ ವರ್ಷಗಟ್ಟಲೆ ಕಾದು ಸೀಟು ಗಿಟ್ಟಿಸಿಕೊಳ್ಳುವ ರಿಸ್ಕ್ ಕೂಡ ಪೋಷಕರ ಮೇಲಿದೆ. ಆದರೆ ಯಾವುದೇ ಪೈಪೋಟಿಗಳಿಲ್ಲದೆ ಸುಲಭ ಮಾರ್ಗ ತೋರುವ ಅಂಗನವಾಡಿಗಳು ಕಾಲ ಬುಡದಲ್ಲಿದ್ದರೂ ಅವುಗಳ ಬಗ್ಗೆ ಕನ್ನಡ ಪೋಷಕರಿಗೆ ತಾತ್ಸಾರವೇ ಹೆಚ್ಚು. ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳಂತೂ ತಮ್ಮ ಮಕ್ಕಳನ್ನು ಸರಕಾರಿ ಶಾಲೆಯ ಕಡೆಗೆ ತಿರುಗಿಯೂ ನೋಡದಂತೆ ಮಾಡುತ್ತಾರೆ ಎನ್ನುವ ಅಪವಾದವಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೊಡಗು ಎಸ್‍ಪಿ ಸುಮನ್ ಡಿ.ಪನ್ನೇಕರ್ ಅವರು ತಮ್ಮ ಎರಡೂವರೆ ವರ್ಷದ ಪುತ್ರಿ ಖುಷಿಯನ್ನು ಫೀ.ಮಾ.ಕಾರ್ಯಪ್ಪ ಕಾಲೇಜು ಸಮೀಪದ ಅಂಗನವಾಡಿಗೆ ದಾಖಲಿಸಿದ್ದಾರೆ.

ಮಕ್ಕಳಿಗೆ ಬಾಲ್ಯದಿಂದಲೇ ನೈತಿಕತೆ ಮತ್ತು ಮೌಲ್ಯಗಳ ಪಾಠ ಅಗತ್ಯವೆನ್ನುವ ಕಾರಣಕ್ಕಾಗಿ “ಖುಷಿ”ಗೆ ಅಂಗನವಾಡಿ ಮೂಲಕವೇ ಮೊದಲ ಪಾಠ ಆರಂಭಿಸುತ್ತಿರುವುದಾಗಿ ಎಸ್‍ಪಿ ತಿಳಿಸಿದ್ದಾರೆ. ಸ್ಥಳೀಯ ಅಂಗನವಾಡಿ ವ್ಯವಸ್ಥೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಅಂಗನವಾಡಿಯ ಇತರ ಮಕ್ಕಳು “ಖುಷಿ”ಯೊಂದಿಗೆ ಖುಷಿ, ಖುಷಿಯಾಗಿ ದಿನ ಕಳೆಯುತ್ತಿರುವುದು ವಿಶೇಷ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago