ಮಡಿಕೇರಿ :ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಮ್ಮ ಮಗುವನ್ನು ಸರಕಾರಿ ಅಂಗನವಾಡಿಗೆ ದಾಖಲಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಕೂಡ ಪ್ರತಿಷ್ಠೆಯನ್ನಾಗಿ ಪರಿಗಣಿಸುತ್ತಿರುವ ಇಂದಿನ ಪೋಷಕರು ಮಕ್ಕಳು ಜನಿಸುತ್ತಲೇ ಇಂಗ್ಲೀಷ್ ಪದ ಪ್ರಯೋಗಗಳನ್ನು ಆರಂಭಿಸುತ್ತಾರೆ. ಬೇಬಿ ಸಿಟ್ಟಿಂಗ್, ಎಲ್ಕೆಜಿ, ಯುಕೆಜಿ ತರಗತಿಗಳಿಗಾಗಿ ವರ್ಷಗಟ್ಟಲೆ ಕಾದು ಸೀಟು ಗಿಟ್ಟಿಸಿಕೊಳ್ಳುವ ರಿಸ್ಕ್ ಕೂಡ ಪೋಷಕರ ಮೇಲಿದೆ. ಆದರೆ ಯಾವುದೇ ಪೈಪೋಟಿಗಳಿಲ್ಲದೆ ಸುಲಭ ಮಾರ್ಗ ತೋರುವ ಅಂಗನವಾಡಿಗಳು ಕಾಲ ಬುಡದಲ್ಲಿದ್ದರೂ ಅವುಗಳ ಬಗ್ಗೆ ಕನ್ನಡ ಪೋಷಕರಿಗೆ ತಾತ್ಸಾರವೇ ಹೆಚ್ಚು. ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳಂತೂ ತಮ್ಮ ಮಕ್ಕಳನ್ನು ಸರಕಾರಿ ಶಾಲೆಯ ಕಡೆಗೆ ತಿರುಗಿಯೂ ನೋಡದಂತೆ ಮಾಡುತ್ತಾರೆ ಎನ್ನುವ ಅಪವಾದವಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೊಡಗು ಎಸ್ಪಿ ಸುಮನ್ ಡಿ.ಪನ್ನೇಕರ್ ಅವರು ತಮ್ಮ ಎರಡೂವರೆ ವರ್ಷದ ಪುತ್ರಿ ಖುಷಿಯನ್ನು ಫೀ.ಮಾ.ಕಾರ್ಯಪ್ಪ ಕಾಲೇಜು ಸಮೀಪದ ಅಂಗನವಾಡಿಗೆ ದಾಖಲಿಸಿದ್ದಾರೆ.
ಮಕ್ಕಳಿಗೆ ಬಾಲ್ಯದಿಂದಲೇ ನೈತಿಕತೆ ಮತ್ತು ಮೌಲ್ಯಗಳ ಪಾಠ ಅಗತ್ಯವೆನ್ನುವ ಕಾರಣಕ್ಕಾಗಿ “ಖುಷಿ”ಗೆ ಅಂಗನವಾಡಿ ಮೂಲಕವೇ ಮೊದಲ ಪಾಠ ಆರಂಭಿಸುತ್ತಿರುವುದಾಗಿ ಎಸ್ಪಿ ತಿಳಿಸಿದ್ದಾರೆ. ಸ್ಥಳೀಯ ಅಂಗನವಾಡಿ ವ್ಯವಸ್ಥೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂಗನವಾಡಿಯ ಇತರ ಮಕ್ಕಳು “ಖುಷಿ”ಯೊಂದಿಗೆ ಖುಷಿ, ಖುಷಿಯಾಗಿ ದಿನ ಕಳೆಯುತ್ತಿರುವುದು ವಿಶೇಷ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…