Advertisement
ಸುದ್ದಿಗಳು

ಪುತ್ರಿಯನ್ನು ಅಂಗನವಾಡಿಗೆ ದಾಖಲಿಸಿ ಮಾದರಿಯಾದ ಮಡಿಕೇರಿ ಎಸ್‍ಪಿ ಡಾ.ಸುಮನ್

Share

ಮಡಿಕೇರಿ :ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಮ್ಮ ಮಗುವನ್ನು ಸರಕಾರಿ ಅಂಗನವಾಡಿಗೆ ದಾಖಲಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಕೂಡ ಪ್ರತಿಷ್ಠೆಯನ್ನಾಗಿ ಪರಿಗಣಿಸುತ್ತಿರುವ ಇಂದಿನ ಪೋಷಕರು ಮಕ್ಕಳು ಜನಿಸುತ್ತಲೇ ಇಂಗ್ಲೀಷ್ ಪದ ಪ್ರಯೋಗಗಳನ್ನು ಆರಂಭಿಸುತ್ತಾರೆ. ಬೇಬಿ ಸಿಟ್ಟಿಂಗ್, ಎಲ್‍ಕೆಜಿ, ಯುಕೆಜಿ ತರಗತಿಗಳಿಗಾಗಿ ವರ್ಷಗಟ್ಟಲೆ ಕಾದು ಸೀಟು ಗಿಟ್ಟಿಸಿಕೊಳ್ಳುವ ರಿಸ್ಕ್ ಕೂಡ ಪೋಷಕರ ಮೇಲಿದೆ. ಆದರೆ ಯಾವುದೇ ಪೈಪೋಟಿಗಳಿಲ್ಲದೆ ಸುಲಭ ಮಾರ್ಗ ತೋರುವ ಅಂಗನವಾಡಿಗಳು ಕಾಲ ಬುಡದಲ್ಲಿದ್ದರೂ ಅವುಗಳ ಬಗ್ಗೆ ಕನ್ನಡ ಪೋಷಕರಿಗೆ ತಾತ್ಸಾರವೇ ಹೆಚ್ಚು. ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳಂತೂ ತಮ್ಮ ಮಕ್ಕಳನ್ನು ಸರಕಾರಿ ಶಾಲೆಯ ಕಡೆಗೆ ತಿರುಗಿಯೂ ನೋಡದಂತೆ ಮಾಡುತ್ತಾರೆ ಎನ್ನುವ ಅಪವಾದವಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೊಡಗು ಎಸ್‍ಪಿ ಸುಮನ್ ಡಿ.ಪನ್ನೇಕರ್ ಅವರು ತಮ್ಮ ಎರಡೂವರೆ ವರ್ಷದ ಪುತ್ರಿ ಖುಷಿಯನ್ನು ಫೀ.ಮಾ.ಕಾರ್ಯಪ್ಪ ಕಾಲೇಜು ಸಮೀಪದ ಅಂಗನವಾಡಿಗೆ ದಾಖಲಿಸಿದ್ದಾರೆ.

ಮಕ್ಕಳಿಗೆ ಬಾಲ್ಯದಿಂದಲೇ ನೈತಿಕತೆ ಮತ್ತು ಮೌಲ್ಯಗಳ ಪಾಠ ಅಗತ್ಯವೆನ್ನುವ ಕಾರಣಕ್ಕಾಗಿ “ಖುಷಿ”ಗೆ ಅಂಗನವಾಡಿ ಮೂಲಕವೇ ಮೊದಲ ಪಾಠ ಆರಂಭಿಸುತ್ತಿರುವುದಾಗಿ ಎಸ್‍ಪಿ ತಿಳಿಸಿದ್ದಾರೆ. ಸ್ಥಳೀಯ ಅಂಗನವಾಡಿ ವ್ಯವಸ್ಥೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಅಂಗನವಾಡಿಯ ಇತರ ಮಕ್ಕಳು “ಖುಷಿ”ಯೊಂದಿಗೆ ಖುಷಿ, ಖುಷಿಯಾಗಿ ದಿನ ಕಳೆಯುತ್ತಿರುವುದು ವಿಶೇಷ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

56 minutes ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago