ಸವಣೂರು : ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ದೇಶಭಕ್ತಿಯನ್ನು ತುಂಬಿಸಬೇಕು.ಅಂತಹ ಪರಿಪೂರ್ಣ ಶಿಕ್ಷಣ ಇಂದಿನ ಅಗತ್ಯ,ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ಇಂತಹ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ ಎಂದು ಹಿರಿಯ ಕೃಷಿಕ ಶ್ರೀಧರ ಕೆದಿಲಾಯ ಪುದ್ಕೋಳಿ ಹೇಳಿದರು.
ಅವರು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶೈಕ್ಷಣಿಕ ವರ್ಷಾರಂಭ ಹಾಗೂ ನೂತನ ವಿದ್ಯಾರ್ಥಿಗಳ ದೀಕ್ಷಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಪಾಲ್ಗೊಂಡ ಎಂಜಿನಿಯರ್ ವಿಶ್ವನಾಥ ಬಲ್ಯಾಯ ಮುಂಡೋಡಿ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ಎಳವೆಯಲ್ಲೇ ಸಂಸ್ಕಾರಯುತ ಶಿಕ್ಷಣ ದೊರಕಿದರೆ ಭವಿಷ್ಯದಲ್ಲಿ ಉತ್ತಮ ನಾಗರೀಕನಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಶಾಲಾ ಆಡಳಿತಾ„ಕಾರಿ ಶುಭಾ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಿದರು.
ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಪ್ರಸ್ತಾವನೆಗೈದರು.ಶಾಲಾ ಮುಖ್ಯಗುರು ರಾಜರಾಮ ವರ್ಮ ವಿಟ್ಲ ಸ್ವಾಗತಿಸಿದರು.ಶಿಕ್ಷಕಿ ರೇಷ್ಮಾ ವಂದಿಸಿದರು.ಶಿಕ್ಷಕಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…