ಸವಣೂರು : ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ದೇಶಭಕ್ತಿಯನ್ನು ತುಂಬಿಸಬೇಕು.ಅಂತಹ ಪರಿಪೂರ್ಣ ಶಿಕ್ಷಣ ಇಂದಿನ ಅಗತ್ಯ,ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ಇಂತಹ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ ಎಂದು ಹಿರಿಯ ಕೃಷಿಕ ಶ್ರೀಧರ ಕೆದಿಲಾಯ ಪುದ್ಕೋಳಿ ಹೇಳಿದರು.
ಅವರು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶೈಕ್ಷಣಿಕ ವರ್ಷಾರಂಭ ಹಾಗೂ ನೂತನ ವಿದ್ಯಾರ್ಥಿಗಳ ದೀಕ್ಷಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಪಾಲ್ಗೊಂಡ ಎಂಜಿನಿಯರ್ ವಿಶ್ವನಾಥ ಬಲ್ಯಾಯ ಮುಂಡೋಡಿ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ಎಳವೆಯಲ್ಲೇ ಸಂಸ್ಕಾರಯುತ ಶಿಕ್ಷಣ ದೊರಕಿದರೆ ಭವಿಷ್ಯದಲ್ಲಿ ಉತ್ತಮ ನಾಗರೀಕನಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಶಾಲಾ ಆಡಳಿತಾ„ಕಾರಿ ಶುಭಾ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಿದರು.
ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಪ್ರಸ್ತಾವನೆಗೈದರು.ಶಾಲಾ ಮುಖ್ಯಗುರು ರಾಜರಾಮ ವರ್ಮ ವಿಟ್ಲ ಸ್ವಾಗತಿಸಿದರು.ಶಿಕ್ಷಕಿ ರೇಷ್ಮಾ ವಂದಿಸಿದರು.ಶಿಕ್ಷಕಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…