ಸವಣೂರು : ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ದೇಶಭಕ್ತಿಯನ್ನು ತುಂಬಿಸಬೇಕು.ಅಂತಹ ಪರಿಪೂರ್ಣ ಶಿಕ್ಷಣ ಇಂದಿನ ಅಗತ್ಯ,ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ಇಂತಹ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ ಎಂದು ಹಿರಿಯ ಕೃಷಿಕ ಶ್ರೀಧರ ಕೆದಿಲಾಯ ಪುದ್ಕೋಳಿ ಹೇಳಿದರು.
ಅವರು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶೈಕ್ಷಣಿಕ ವರ್ಷಾರಂಭ ಹಾಗೂ ನೂತನ ವಿದ್ಯಾರ್ಥಿಗಳ ದೀಕ್ಷಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಪಾಲ್ಗೊಂಡ ಎಂಜಿನಿಯರ್ ವಿಶ್ವನಾಥ ಬಲ್ಯಾಯ ಮುಂಡೋಡಿ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ಎಳವೆಯಲ್ಲೇ ಸಂಸ್ಕಾರಯುತ ಶಿಕ್ಷಣ ದೊರಕಿದರೆ ಭವಿಷ್ಯದಲ್ಲಿ ಉತ್ತಮ ನಾಗರೀಕನಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಶಾಲಾ ಆಡಳಿತಾ„ಕಾರಿ ಶುಭಾ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಿದರು.
ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಪ್ರಸ್ತಾವನೆಗೈದರು.ಶಾಲಾ ಮುಖ್ಯಗುರು ರಾಜರಾಮ ವರ್ಮ ವಿಟ್ಲ ಸ್ವಾಗತಿಸಿದರು.ಶಿಕ್ಷಕಿ ರೇಷ್ಮಾ ವಂದಿಸಿದರು.ಶಿಕ್ಷಕಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…