ಪುಲ್ವಾಮ ದಾಳಿ : ಯೋಧರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು

February 14, 2020
11:00 AM

ನವದೆಹಲಿ: ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವಾರ್ಪಣೆ ಮಾಡಿದ್ದಾರೆ. ಇದೇ ವೇಳೆ ಟ್ವೀಟ್ ಮಾಡಿರುವ ಪ್ರಧಾನಿಗಳು  ಯೋಧರ ತ್ಯಾಗ ಮತ್ತು ಸಾಹಸವನ್ನು ದೇಶ ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.

“ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು” ಎಂದಿದ್ದಾರೆ.

019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಗೆ 40 ಮಂದಿ ಸಿಆರ್­ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಆ ಕರಾಳ ಘಟನೆಗೆ ಒಂದು ವರ್ಷ ಸಂದ ಹಿನ್ನಲೆಯಲ್ಲಿ ದೇಶ ಇಂದು ಬಲಿದಾನಗೈದ ಹುತಾತ್ಮರ ನೆನಪಲ್ಲಿ ಕಂಬನಿ ಮಿಡಿಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror