ನವದೆಹಲಿ: ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವಾರ್ಪಣೆ ಮಾಡಿದ್ದಾರೆ. ಇದೇ ವೇಳೆ ಟ್ವೀಟ್ ಮಾಡಿರುವ ಪ್ರಧಾನಿಗಳು ಯೋಧರ ತ್ಯಾಗ ಮತ್ತು ಸಾಹಸವನ್ನು ದೇಶ ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.
“ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು” ಎಂದಿದ್ದಾರೆ.
019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಗೆ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಆ ಕರಾಳ ಘಟನೆಗೆ ಒಂದು ವರ್ಷ ಸಂದ ಹಿನ್ನಲೆಯಲ್ಲಿ ದೇಶ ಇಂದು ಬಲಿದಾನಗೈದ ಹುತಾತ್ಮರ ನೆನಪಲ್ಲಿ ಕಂಬನಿ ಮಿಡಿಯುತ್ತಿದೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…