ವಿಶೇಷ ವರದಿಗಳು

ಪುಸ್ತಕ ಜೋಳಿಗೆ ತುಂಬಿ ಶಾಲೆ ಪ್ರಾರಂಭ : ಸರಕಾರಿ ಶಾಲೆಯಲ್ಲಿ ವಿನೂತನ ಪ್ರಯೋಗ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು: ಈ ಸರಕಾರಿ ಶಾಲೆಯಲ್ಲಿ  ಜೀವಂತಿಕೆ ಇದೆ. ಒಂದಿಲ್ಲೊಂದು ವಿನೂತನ ಪ್ರಯೋಗ ನಡೆಸಿ ಶಾಲೆಯ ಮಕ್ಕಳನ್ನು ಕ್ರಿಯೇಟಿವ್ ಮಾಡುತ್ತಾರೆ. ಸದಾ ಚಟುವಟಿಕೆಯಲ್ಲಿ ಇರುವಂತೆ ಮಾಡುತ್ತಾರೆ. ಈ ಬಾರಿ ಪುಸ್ತಕ ಜೋಳಿಗೆ ತುಂಬುವ ಮೂಲಕ ಶಾಲೆ ಪುನರಾರಂಭ ಮಾಡುತ್ತಿದ್ದಾರೆ. ಮಕ್ಕಳಿಗೆ ಓದುವ ರುಚಿ ಹತ್ತಿಸುತ್ತಿದ್ದಾರೆ. ಇದು  ಸ.ಹಿ.ಪ್ರಾ.ಶಾಲೆ ಪುಣ್ಚಪ್ಪಾಡಿ.

Advertisement
Advertisement

ಪುತ್ತೂರು ತಾಲೂಕಿನ ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಶಾಲೆ ಇದು. ಎಲ್ಲಾ ಜನಪ್ರತಿನಿಧಿಗಳೂ, ಅಧಿಕಾರಿಗಳು,  ಶಿಕ್ಷಣ ಪ್ರೇಮಿಗಳು ಈ ಶಾಲೆಯನ್ನು ಗಮನಿಸುತ್ತಲೇ ಇರಬೇಕು. ಒಂದು ಸರಕಾರಿ ಶಾಲೆಯನ್ನು  ಹೇಗೆ ಲೈವ್ ಆಗಿ ಇಡಬಹುದು  ಹಾಗೂ ಮಕ್ಕಳನ್ನು  ಹೇಗೆ ಕ್ರಿಯೇಟಿವ್ ಆಗಿ ಬೆಳೆಸಬಹುದು ಎಂಬುದಕ್ಕೆ ಈ ಶಾಲೆ ಮಾದರಿ.

ಕಳೆದ ಮೂರು ವರ್ಷಗಳಿಂದ ಅಕ್ಷರ ರಥ, ಕಲಿಕಾ ಪಲ್ಲಕ್ಕಿ, ಕಲಿಕಾ ಮಂಟಪ ಹೀಗೆ ವಿಶಿಷ್ಟವಾಗಿ ಪ್ರಾರಂಭೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಪುಣ್ಚಪ್ಪಾಡಿ ಶಾಲೆಯು ಈ ವರ್ಷ  ವಿನೂತನವಾಗಿ ಪುಸ್ತಕ ಜೋಳಿಗೆಯಾಗಿ ಆಚರಿಸಲು ಅಣಿಯಾಗಿದೆ. ನೂತನ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳುತ್ತಾ, ಶಾಲೆಗೆ ದಾಖಲಾಗುವ ಮಕ್ಕಳು ಪುಸ್ತಕ ಜೋಳಿಗೆಗೆ ಪುಸ್ತಕವನ್ನು ತುಂಬಿ ದಾಖಲಾತಿ ಹೊಂದಲಿದ್ದಾರೆ. ಶಾಲೆಯ ಪೋಷಕರೂ ಪುಸ್ತಕ ಜೋಳಿಗೆಯ ತುಂಬಲಿದ್ದಾರೆ. ಪುಸ್ತಕ ಜೋಳಿಗೆಯನ್ನು ಶಾಲೆಯಂಗಳದಲ್ಲಿ ಮಾಡುತ್ತಾರೆ. ನಾಳೆ ಹೊಸದಾಗಿ ದಾಖಲಾಗುವ 1 ನೇ ತರಗತಿಯ ಎಲ್ಲಾ ಮಕ್ಕಳು ಶಾಲಾ ಗ್ರಂಥಾಲಯಕ್ಕೆ ಬಳಸುವಂತಹ ಪುಸ್ತಕಗಳನ್ನು ಮನೆಯಿಂದಲೇ ತಂದು ಜೋಳಿಗೆಯನ್ನು ತುಂಬುತ್ತಾರೆ.

ಪುಸ್ತಕ ಜೋಳಿಗೆಯ ಮೂಲಕ ಶಾಲಾ ಗ್ರಂಥ ಭಂಡಾರಕ್ಕೆ ಪುಸ್ತಕದಾನ ನೀಡುವ ಪರಿಕಲ್ಪನೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಹಿರಿಯ ಸಾಹಿತಿ ಬಿ. ಪುರಂದರ ಭಟ್ ,  ಅಂಕಣಕಾರರು, ಹಿರಿಯ ಸಾಹಿತಿ  ಪ್ರೊ.ವಿ.ಬಿ.ಅರ್ತಿಕಜೆ , ಪ್ರಕಾಶ್ ಕೊಡಂಕಿರಿ, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅಲುಂಬುಡ ಹಾಗೂ ಇನ್ನೂ ಹಲವಾರು ಮಂದಿ ಪುಸ್ತಕಗಳನ್ನು ನೀಡಿದ್ದಾರೆ.

ಈ ಪುಸ್ತಕಗಳನ್ನು  ಮಕ್ಕಳಿಗೆ ಹಂತ ಹಂತವಾಗಿ ಓದಿಸುವುದು  ಹಾಗೂ ಶಾಲಾ ಗ್ರಂಥಾಲಯವನ್ನು ಜೋಪಾನವಾಗಿರಿಸಿ ಹಿರಿಯ ಮಕ್ಕಳಿಂದ ಓದಿಸುವುದು ಸೇರಿದಂತೆ ಮಕ್ಕಳಿಗೆ ಪುಸ್ತಕದ ಬಗ್ಗೆ ಪ್ರೀತಿ ಮೂಡಿಸುವ ಯೋಜನೆ ಈ ಶಾಲೆಯದ್ದಾಗಿದೆ.

Advertisement

ಅಂದ ಹಾಗೆ ಈ  ಶಾಲೆಗೆ ಪುಸ್ತಕ ನೀಡಿ ಪುಸ್ತಕ ಜೋಳಿಗೆಯನ್ನು ನೀವೂ ತುಂಬಬಹುದು. ನಿಮ್ಮಲ್ಲೊಂದು ಒಳ್ಳೆಯ ಪುಸ್ತಕ ಇದ್ದರೆ ನೀಡಬಹುದು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

2 hours ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

3 hours ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

3 hours ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

3 hours ago

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

13 hours ago