Advertisement
ವಿಶೇಷ ವರದಿಗಳು

ಪುಸ್ತಕ ಜೋಳಿಗೆ ತುಂಬಿ ಶಾಲೆ ಪ್ರಾರಂಭ : ಸರಕಾರಿ ಶಾಲೆಯಲ್ಲಿ ವಿನೂತನ ಪ್ರಯೋಗ

Share

ಸವಣೂರು: ಈ ಸರಕಾರಿ ಶಾಲೆಯಲ್ಲಿ  ಜೀವಂತಿಕೆ ಇದೆ. ಒಂದಿಲ್ಲೊಂದು ವಿನೂತನ ಪ್ರಯೋಗ ನಡೆಸಿ ಶಾಲೆಯ ಮಕ್ಕಳನ್ನು ಕ್ರಿಯೇಟಿವ್ ಮಾಡುತ್ತಾರೆ. ಸದಾ ಚಟುವಟಿಕೆಯಲ್ಲಿ ಇರುವಂತೆ ಮಾಡುತ್ತಾರೆ. ಈ ಬಾರಿ ಪುಸ್ತಕ ಜೋಳಿಗೆ ತುಂಬುವ ಮೂಲಕ ಶಾಲೆ ಪುನರಾರಂಭ ಮಾಡುತ್ತಿದ್ದಾರೆ. ಮಕ್ಕಳಿಗೆ ಓದುವ ರುಚಿ ಹತ್ತಿಸುತ್ತಿದ್ದಾರೆ. ಇದು  ಸ.ಹಿ.ಪ್ರಾ.ಶಾಲೆ ಪುಣ್ಚಪ್ಪಾಡಿ.

ಪುತ್ತೂರು ತಾಲೂಕಿನ ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಶಾಲೆ ಇದು. ಎಲ್ಲಾ ಜನಪ್ರತಿನಿಧಿಗಳೂ, ಅಧಿಕಾರಿಗಳು,  ಶಿಕ್ಷಣ ಪ್ರೇಮಿಗಳು ಈ ಶಾಲೆಯನ್ನು ಗಮನಿಸುತ್ತಲೇ ಇರಬೇಕು. ಒಂದು ಸರಕಾರಿ ಶಾಲೆಯನ್ನು  ಹೇಗೆ ಲೈವ್ ಆಗಿ ಇಡಬಹುದು  ಹಾಗೂ ಮಕ್ಕಳನ್ನು  ಹೇಗೆ ಕ್ರಿಯೇಟಿವ್ ಆಗಿ ಬೆಳೆಸಬಹುದು ಎಂಬುದಕ್ಕೆ ಈ ಶಾಲೆ ಮಾದರಿ.

ಕಳೆದ ಮೂರು ವರ್ಷಗಳಿಂದ ಅಕ್ಷರ ರಥ, ಕಲಿಕಾ ಪಲ್ಲಕ್ಕಿ, ಕಲಿಕಾ ಮಂಟಪ ಹೀಗೆ ವಿಶಿಷ್ಟವಾಗಿ ಪ್ರಾರಂಭೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಪುಣ್ಚಪ್ಪಾಡಿ ಶಾಲೆಯು ಈ ವರ್ಷ  ವಿನೂತನವಾಗಿ ಪುಸ್ತಕ ಜೋಳಿಗೆಯಾಗಿ ಆಚರಿಸಲು ಅಣಿಯಾಗಿದೆ. ನೂತನ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳುತ್ತಾ, ಶಾಲೆಗೆ ದಾಖಲಾಗುವ ಮಕ್ಕಳು ಪುಸ್ತಕ ಜೋಳಿಗೆಗೆ ಪುಸ್ತಕವನ್ನು ತುಂಬಿ ದಾಖಲಾತಿ ಹೊಂದಲಿದ್ದಾರೆ. ಶಾಲೆಯ ಪೋಷಕರೂ ಪುಸ್ತಕ ಜೋಳಿಗೆಯ ತುಂಬಲಿದ್ದಾರೆ. ಪುಸ್ತಕ ಜೋಳಿಗೆಯನ್ನು ಶಾಲೆಯಂಗಳದಲ್ಲಿ ಮಾಡುತ್ತಾರೆ. ನಾಳೆ ಹೊಸದಾಗಿ ದಾಖಲಾಗುವ 1 ನೇ ತರಗತಿಯ ಎಲ್ಲಾ ಮಕ್ಕಳು ಶಾಲಾ ಗ್ರಂಥಾಲಯಕ್ಕೆ ಬಳಸುವಂತಹ ಪುಸ್ತಕಗಳನ್ನು ಮನೆಯಿಂದಲೇ ತಂದು ಜೋಳಿಗೆಯನ್ನು ತುಂಬುತ್ತಾರೆ.

ಪುಸ್ತಕ ಜೋಳಿಗೆಯ ಮೂಲಕ ಶಾಲಾ ಗ್ರಂಥ ಭಂಡಾರಕ್ಕೆ ಪುಸ್ತಕದಾನ ನೀಡುವ ಪರಿಕಲ್ಪನೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಹಿರಿಯ ಸಾಹಿತಿ ಬಿ. ಪುರಂದರ ಭಟ್ ,  ಅಂಕಣಕಾರರು, ಹಿರಿಯ ಸಾಹಿತಿ  ಪ್ರೊ.ವಿ.ಬಿ.ಅರ್ತಿಕಜೆ , ಪ್ರಕಾಶ್ ಕೊಡಂಕಿರಿ, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅಲುಂಬುಡ ಹಾಗೂ ಇನ್ನೂ ಹಲವಾರು ಮಂದಿ ಪುಸ್ತಕಗಳನ್ನು ನೀಡಿದ್ದಾರೆ.

ಈ ಪುಸ್ತಕಗಳನ್ನು  ಮಕ್ಕಳಿಗೆ ಹಂತ ಹಂತವಾಗಿ ಓದಿಸುವುದು  ಹಾಗೂ ಶಾಲಾ ಗ್ರಂಥಾಲಯವನ್ನು ಜೋಪಾನವಾಗಿರಿಸಿ ಹಿರಿಯ ಮಕ್ಕಳಿಂದ ಓದಿಸುವುದು ಸೇರಿದಂತೆ ಮಕ್ಕಳಿಗೆ ಪುಸ್ತಕದ ಬಗ್ಗೆ ಪ್ರೀತಿ ಮೂಡಿಸುವ ಯೋಜನೆ ಈ ಶಾಲೆಯದ್ದಾಗಿದೆ.

ಅಂದ ಹಾಗೆ ಈ  ಶಾಲೆಗೆ ಪುಸ್ತಕ ನೀಡಿ ಪುಸ್ತಕ ಜೋಳಿಗೆಯನ್ನು ನೀವೂ ತುಂಬಬಹುದು. ನಿಮ್ಮಲ್ಲೊಂದು ಒಳ್ಳೆಯ ಪುಸ್ತಕ ಇದ್ದರೆ ನೀಡಬಹುದು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

37 minutes ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

8 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

8 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

15 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

17 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago