ಪೆರಾಜೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ “ನೆರೆಹೊರೆ ಯುವಜನ ಸಂಸತ್ತು 2019-20” ಎಂಬ ಯೋಗ ಕಾರ್ಯಕ್ರಮವು ಪೆರಾಜೆಯ ಜ್ಯೋತಿ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು.
ನೆಹರು ಯುವ ಕೇಂದ್ರ ಮಡಿಕೇರಿ, ಚಿಗುರು ಯುವಕ ಮಂಡಲ ಪೆರಾಜೆ,ಯುವ ಕೋಟೆ ಯುವಕ ಮಂಡಲ ಪುತ್ಯ ಪೆರಾಜೆ,ಯುವಸ್ಪೂರ್ತಿ ಸಂಘ ಕರಂಟಡ್ಕ,
ಅಮಚೂರು ಯುವಕ ಮಂಡಲ ಪೆರಾಜೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ನೆಹರು ಯುವ ಕೇಂದ್ರ ಮಡಿಕೇರಿ ಇದರ ಲೆಕ್ಕಾಧಿಕಾರಿಗಳಾದ ಮಹೇಶ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.
ಜ್ಯೋತಿ ಪ್ರೌಢ ಶಾಲೆ ಪೆರಾಜೆ ಇದರ ಮುಖ್ಯ ಶಿಕ್ಷಕರಾದ ದೊಡ್ಡಣ್ಣ ಬರಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಲ್ಲದೆ ತರಬೇತಿ ಹಾಗೂ ಮಾಹಿತಿ ಉಪನ್ಯಾಸ ನೀಡಲು ಯೋಗ ತರಬೇತುದಾರರಾದ ತೀರ್ಥೇಶ್ ಕೆ. ವಿ, ಸಂತೋಷ್ ಆಗಮಿಸಿದ್ದರು.
ಕಾರ್ಯಕ್ರಮವನ್ನು ಚಿಗುರು ಯುವಕಮಂಡಲದ ಅಧ್ಯಕ್ಷ ಶೀತಲ್ ಕುಂಬಳಚೇರಿ ಅವರು ಸ್ವಾಗತ ಮತ್ತು ನಿರೂಪಿಸಿ, ಚಿಗುರು ಯುವಕಮಂಡಲದ ಕ್ರೀಡಾ ಕಾರ್ಯದರ್ಶಿ ದೀಪಕ್ ಮಜಿಕೋಡಿ ವಂದಿಸಿದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…