ಪೆರಾಜೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ “ನೆರೆಹೊರೆ ಯುವಜನ ಸಂಸತ್ತು 2019-20” ಎಂಬ ಯೋಗ ಕಾರ್ಯಕ್ರಮವು ಪೆರಾಜೆಯ ಜ್ಯೋತಿ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು.
ನೆಹರು ಯುವ ಕೇಂದ್ರ ಮಡಿಕೇರಿ, ಚಿಗುರು ಯುವಕ ಮಂಡಲ ಪೆರಾಜೆ,ಯುವ ಕೋಟೆ ಯುವಕ ಮಂಡಲ ಪುತ್ಯ ಪೆರಾಜೆ,ಯುವಸ್ಪೂರ್ತಿ ಸಂಘ ಕರಂಟಡ್ಕ,
ಅಮಚೂರು ಯುವಕ ಮಂಡಲ ಪೆರಾಜೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ನೆಹರು ಯುವ ಕೇಂದ್ರ ಮಡಿಕೇರಿ ಇದರ ಲೆಕ್ಕಾಧಿಕಾರಿಗಳಾದ ಮಹೇಶ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.
ಜ್ಯೋತಿ ಪ್ರೌಢ ಶಾಲೆ ಪೆರಾಜೆ ಇದರ ಮುಖ್ಯ ಶಿಕ್ಷಕರಾದ ದೊಡ್ಡಣ್ಣ ಬರಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಲ್ಲದೆ ತರಬೇತಿ ಹಾಗೂ ಮಾಹಿತಿ ಉಪನ್ಯಾಸ ನೀಡಲು ಯೋಗ ತರಬೇತುದಾರರಾದ ತೀರ್ಥೇಶ್ ಕೆ. ವಿ, ಸಂತೋಷ್ ಆಗಮಿಸಿದ್ದರು.
ಕಾರ್ಯಕ್ರಮವನ್ನು ಚಿಗುರು ಯುವಕಮಂಡಲದ ಅಧ್ಯಕ್ಷ ಶೀತಲ್ ಕುಂಬಳಚೇರಿ ಅವರು ಸ್ವಾಗತ ಮತ್ತು ನಿರೂಪಿಸಿ, ಚಿಗುರು ಯುವಕಮಂಡಲದ ಕ್ರೀಡಾ ಕಾರ್ಯದರ್ಶಿ ದೀಪಕ್ ಮಜಿಕೋಡಿ ವಂದಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…