ಪೆರಾಜೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ “ನೆರೆಹೊರೆ ಯುವಜನ ಸಂಸತ್ತು 2019-20” ಎಂಬ ಯೋಗ ಕಾರ್ಯಕ್ರಮವು ಪೆರಾಜೆಯ ಜ್ಯೋತಿ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು.
ನೆಹರು ಯುವ ಕೇಂದ್ರ ಮಡಿಕೇರಿ, ಚಿಗುರು ಯುವಕ ಮಂಡಲ ಪೆರಾಜೆ,ಯುವ ಕೋಟೆ ಯುವಕ ಮಂಡಲ ಪುತ್ಯ ಪೆರಾಜೆ,ಯುವಸ್ಪೂರ್ತಿ ಸಂಘ ಕರಂಟಡ್ಕ,
ಅಮಚೂರು ಯುವಕ ಮಂಡಲ ಪೆರಾಜೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ನೆಹರು ಯುವ ಕೇಂದ್ರ ಮಡಿಕೇರಿ ಇದರ ಲೆಕ್ಕಾಧಿಕಾರಿಗಳಾದ ಮಹೇಶ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.
ಜ್ಯೋತಿ ಪ್ರೌಢ ಶಾಲೆ ಪೆರಾಜೆ ಇದರ ಮುಖ್ಯ ಶಿಕ್ಷಕರಾದ ದೊಡ್ಡಣ್ಣ ಬರಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಲ್ಲದೆ ತರಬೇತಿ ಹಾಗೂ ಮಾಹಿತಿ ಉಪನ್ಯಾಸ ನೀಡಲು ಯೋಗ ತರಬೇತುದಾರರಾದ ತೀರ್ಥೇಶ್ ಕೆ. ವಿ, ಸಂತೋಷ್ ಆಗಮಿಸಿದ್ದರು.
ಕಾರ್ಯಕ್ರಮವನ್ನು ಚಿಗುರು ಯುವಕಮಂಡಲದ ಅಧ್ಯಕ್ಷ ಶೀತಲ್ ಕುಂಬಳಚೇರಿ ಅವರು ಸ್ವಾಗತ ಮತ್ತು ನಿರೂಪಿಸಿ, ಚಿಗುರು ಯುವಕಮಂಡಲದ ಕ್ರೀಡಾ ಕಾರ್ಯದರ್ಶಿ ದೀಪಕ್ ಮಜಿಕೋಡಿ ವಂದಿಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…