Advertisement
ನಮ್ಮೂರ ಸುದ್ದಿ

ಪೆರಾಜೆಯಲ್ಲಿ ನೆರೆಹೊರೆ ಯುವಜನ ಸಂಸತ್ತು ಯೋಗ ಕಾರ್ಯಕ್ರಮ

Share

ಪೆರಾಜೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ “ನೆರೆಹೊರೆ ಯುವಜನ ಸಂಸತ್ತು 2019-20” ಎಂಬ ಯೋಗ ಕಾರ್ಯಕ್ರಮವು ಪೆರಾಜೆಯ ಜ್ಯೋತಿ ಪ್ರೌಢ ಶಾಲಾ ಸಭಾಂಗಣದಲ್ಲಿ  ನಡೆಯಿತು.

ನೆಹರು ಯುವ ಕೇಂದ್ರ ಮಡಿಕೇರಿ, ಚಿಗುರು ಯುವಕ ಮಂಡಲ ಪೆರಾಜೆ,ಯುವ ಕೋಟೆ ಯುವಕ ಮಂಡಲ ಪುತ್ಯ ಪೆರಾಜೆ,ಯುವಸ್ಪೂರ್ತಿ ಸಂಘ ಕರಂಟಡ್ಕ,
ಅಮಚೂರು ಯುವಕ ಮಂಡಲ ಪೆರಾಜೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ನೆಹರು ಯುವ ಕೇಂದ್ರ ಮಡಿಕೇರಿ ಇದರ ಲೆಕ್ಕಾಧಿಕಾರಿಗಳಾದ ಮಹೇಶ್  ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.

ಜ್ಯೋತಿ ಪ್ರೌಢ ಶಾಲೆ ಪೆರಾಜೆ ಇದರ ಮುಖ್ಯ ಶಿಕ್ಷಕರಾದ  ದೊಡ್ಡಣ್ಣ ಬರಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಲ್ಲದೆ ತರಬೇತಿ ಹಾಗೂ ಮಾಹಿತಿ ಉಪನ್ಯಾಸ ನೀಡಲು ಯೋಗ ತರಬೇತುದಾರರಾದ ತೀರ್ಥೇಶ್ ಕೆ. ವಿ,  ಸಂತೋಷ್  ಆಗಮಿಸಿದ್ದರು.
ಕಾರ್ಯಕ್ರಮವನ್ನು ಚಿಗುರು ಯುವಕಮಂಡಲದ ಅಧ್ಯಕ್ಷ ಶೀತಲ್ ಕುಂಬಳಚೇರಿ ಅವರು ಸ್ವಾಗತ ಮತ್ತು ನಿರೂಪಿಸಿ, ಚಿಗುರು ಯುವಕಮಂಡಲದ ಕ್ರೀಡಾ ಕಾರ್ಯದರ್ಶಿ ದೀಪಕ್ ಮಜಿಕೋಡಿ ವಂದಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

7 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

16 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

20 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago