Advertisement
ಸುದ್ದಿಗಳು

ಪೆರಾಜೆ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ

Share

ಸುಳ್ಯ: ನೆಹರು ಯುವ ಕೇಂದ್ರ ಮಡಿಕೇರಿ ಮತ್ತು ಚಿಗುರು ಕ್ರೀಡಾ ಮತ್ತು ಕಲಾಯುವಕ ಮಂಡಲ ಪೆರಾಜೆ ಮಡಿಕೇರಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಪೆರಾಜೆ ಸ.ಹಿ.ಪ್ರಾ.ಶಾಲೆ (ಕುಂಬಳಚೇರಿ)ಯ ಮೈದಾನದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಸ್ವಚ್ಛ ಭಾರತದೊಳಗೆ ನಮ್ಮ ಮನಸ್ಸು ಸ್ವಚ್ಛತೆಯಿಂದ ಕೂಡಿದ್ದರೆ ಪರಿಸರ ಸ್ಚಚ್ಚವಾಗುತ್ತದೆ, ಈ ನಿಟ್ಟಿನಲ್ಲಿ ಯುವಕಮಂಡಲದ ಸಾಮಾಜಿಕ ಕಾರ್ಯಕ್ರಮ ಸ್ವಾಗತಾರ್ಹ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ವಿಜೇತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ಯುವಕ ಮಂಡಲದ ಅಧ್ಯಕ್ಷ ಶೀತಲ್ ಕುಂಬಳಚೇರಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸ.ಹಿ.ಪ್ರಾ.ಶಾಲೆ ಪೆರಾಜೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಕೊಡಗು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸೋಮವಾರಪೇಟೆ ತಾಲೂಕು ಯಡೂರು ಎ. ಎಂ.ಆನಂದ ಮಾಸ್ತರ್  ಮತ್ತು ಚೆಸ್ಕಾ ಪೆರಾಜೆ ಇದರ ಲೈನ್ ಮೇನ್ ವಿಜಯ ಕುಮಾರ್ ಅರುಣಗುಂಜ ಇವರನ್ನು ಸನ್ಮಾನಿಸಲಾಯಿತು.

ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಿ ಧರಣೀಧರ, ನೆಹರು ಯುವಕೇಂದ್ರ ಕೊಡಗು ಜಿಲ್ಲಾ ಯುವ ಸಂಯೋಜನಾಧಿಕಾರಿ ಅಲಿ ಸಬ್ರಿನ್, ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆ ಇದರ ಆಡಳಿತ ಮೊಕ್ತೇಸರ ವಿಶ್ವನಾಥ್ ಕುಂಬಳಚೇರಿ, ಗ್ರಾಮ ಪಂಚಾಯತ್ ಸದಸ್ಯರಾದ ಉದಯಚಂದ್ರ ಕುಂಬಳಚೇರಿ, ಶೀಲಾ ಚಿದಾನಂದ ನಿಡ್ಯಮಲೆ, ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಗುಡ್ಡೆಮನೆ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಧರ್ಮಪಾಲ ಪೀಚೆಮನೆ ಉಪಸ್ಥಿತರಿದ್ದರು.

ದೀಪಕ್ ಮಜಿಕೋಡಿ ಮತ್ತು ಭವಿತ್ ಕುಂಬಳಚೇರಿ ಪ್ರಾರ್ಥಿಸಿದರು. ಯುವಕಮಂಡಲದ ಕಾರ್ಯದರ್ಶಿ ನಿಶಾಂತ್ ಮಜಿಕೋಡಿ ಸ್ವಾಗತಿಸಿ, ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ದಿವಾಕರ ಮಜಿಕೋಡಿ ನಿರೂಪಿಸಿ ಯುವಕ ಮಂಡಲದ ಉಪಾಧ್ಯಕ್ಷ ಭುವನ್ ಕುಂಬಳಚೇರಿ ವಂದಿಸಿದರು. ಬಳಿಕ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ವಿವಿಧ ಕ್ರೀಡಾಕೂಟಗಳು ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

16 seconds ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

9 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

9 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

10 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

14 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago