Advertisement
ಸುದ್ದಿಗಳು

ಪೆರಾಜೆ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ

Share

ಸುಳ್ಯ: ನೆಹರು ಯುವ ಕೇಂದ್ರ ಮಡಿಕೇರಿ ಮತ್ತು ಚಿಗುರು ಕ್ರೀಡಾ ಮತ್ತು ಕಲಾಯುವಕ ಮಂಡಲ ಪೆರಾಜೆ ಮಡಿಕೇರಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಪೆರಾಜೆ ಸ.ಹಿ.ಪ್ರಾ.ಶಾಲೆ (ಕುಂಬಳಚೇರಿ)ಯ ಮೈದಾನದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಸ್ವಚ್ಛ ಭಾರತದೊಳಗೆ ನಮ್ಮ ಮನಸ್ಸು ಸ್ವಚ್ಛತೆಯಿಂದ ಕೂಡಿದ್ದರೆ ಪರಿಸರ ಸ್ಚಚ್ಚವಾಗುತ್ತದೆ, ಈ ನಿಟ್ಟಿನಲ್ಲಿ ಯುವಕಮಂಡಲದ ಸಾಮಾಜಿಕ ಕಾರ್ಯಕ್ರಮ ಸ್ವಾಗತಾರ್ಹ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ವಿಜೇತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ಯುವಕ ಮಂಡಲದ ಅಧ್ಯಕ್ಷ ಶೀತಲ್ ಕುಂಬಳಚೇರಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸ.ಹಿ.ಪ್ರಾ.ಶಾಲೆ ಪೆರಾಜೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಕೊಡಗು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸೋಮವಾರಪೇಟೆ ತಾಲೂಕು ಯಡೂರು ಎ. ಎಂ.ಆನಂದ ಮಾಸ್ತರ್  ಮತ್ತು ಚೆಸ್ಕಾ ಪೆರಾಜೆ ಇದರ ಲೈನ್ ಮೇನ್ ವಿಜಯ ಕುಮಾರ್ ಅರುಣಗುಂಜ ಇವರನ್ನು ಸನ್ಮಾನಿಸಲಾಯಿತು.

ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಿ ಧರಣೀಧರ, ನೆಹರು ಯುವಕೇಂದ್ರ ಕೊಡಗು ಜಿಲ್ಲಾ ಯುವ ಸಂಯೋಜನಾಧಿಕಾರಿ ಅಲಿ ಸಬ್ರಿನ್, ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆ ಇದರ ಆಡಳಿತ ಮೊಕ್ತೇಸರ ವಿಶ್ವನಾಥ್ ಕುಂಬಳಚೇರಿ, ಗ್ರಾಮ ಪಂಚಾಯತ್ ಸದಸ್ಯರಾದ ಉದಯಚಂದ್ರ ಕುಂಬಳಚೇರಿ, ಶೀಲಾ ಚಿದಾನಂದ ನಿಡ್ಯಮಲೆ, ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಗುಡ್ಡೆಮನೆ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಧರ್ಮಪಾಲ ಪೀಚೆಮನೆ ಉಪಸ್ಥಿತರಿದ್ದರು.

ದೀಪಕ್ ಮಜಿಕೋಡಿ ಮತ್ತು ಭವಿತ್ ಕುಂಬಳಚೇರಿ ಪ್ರಾರ್ಥಿಸಿದರು. ಯುವಕಮಂಡಲದ ಕಾರ್ಯದರ್ಶಿ ನಿಶಾಂತ್ ಮಜಿಕೋಡಿ ಸ್ವಾಗತಿಸಿ, ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ದಿವಾಕರ ಮಜಿಕೋಡಿ ನಿರೂಪಿಸಿ ಯುವಕ ಮಂಡಲದ ಉಪಾಧ್ಯಕ್ಷ ಭುವನ್ ಕುಂಬಳಚೇರಿ ವಂದಿಸಿದರು. ಬಳಿಕ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ವಿವಿಧ ಕ್ರೀಡಾಕೂಟಗಳು ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

5 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

5 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

5 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

15 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

16 hours ago