ಪೆರಾಜೆ: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪೆರಾಜೆ ಇದರ 2018-19ರ ನೂತನ ವರ್ಷದಲ್ಲಿ ರೂ. 9.59 ಲಕ್ಷ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ತಿಳಿಸಿದ್ದಾರೆ.
ಪೆರಾಜೆಯ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪಾರದರ್ಶಕ ಮತ್ತು ಸಕರಾತ್ಮಕ ಸಹಕಾರ ಮನೋಭಾವನೆಯ ಸೇವೆಯೇ ನಮ್ಮ ಮೊದಲ ಗುರಿ. ಸದಸ್ಯರು ಸ್ವಾವಲಂಬಿಗಳಾಗುವಲ್ಲಿ ಸಂಘದ ವತಿಯಿಂದ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಸದಸ್ಯರು ಸಾಲಮನ್ನಾ ಮೊತ್ತವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಸಕಾಲದಲ್ಲಿ ಸಾಲ ಮರುಪಾವತಿಸಿ ಹೊಂದಿಕೊಳ್ಳುವ ಬಗ್ಗೆ ಹಾಗೂ ಕೃಷಿ ಉತ್ಪನ್ನಗಳನ್ನು ಸಂಘದ ಮುಖಾಂತರವೇ ಮಾರಾಟ ಮಾಡಿ ಸಂಘದ ವ್ಯವಹಾರಗಳನ್ನು ಹೆಚ್ಚಿಸುವುದರ ಜೊತೆಗೆ ತಾವೂ ಆರ್ಥಿಕವಾಗಿ ಸದೃಡರಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾ.ಕೃ.ಪ.ಸ ಸಂಘದ ಉಪಾಧ್ಯಕ್ಷ ಮೋನಪ್ಪ ನಿಡ್ಯಮಲೆ, ನಿರ್ದೇಶಕರುಗಳಾದ ಅಶೋಕ್ ಪೆರುಮುಂಡ, ಗಾಂಧಿಪ್ರಸಾದ್ ಬಂಗಾರಕೋಡಿ, ದಿನರಾಜ ದೊಡ್ಡಡ್ಕ, ಪ್ರಸನ್ನ ನೆಕ್ಕಿಲ, ರೇಣುಕಾ.ಎಲ್ ಕುಂದಲ್ಪಾಡಿ , ಪ್ರಮೀಳ ಭಾರದ್ವಾಜ್, ಉದಯ ಆಚಾರ್, ದಾಸಪ್ಪ ಮಡಿವಾಳ, ಜಯರಾಮ .ಪಿ.ಟಿ. ಕಿರಣ್ ಬಂಗಾರಕೋಡಿ, ಶೇಷಪ್ಪ ಎನ್.ವಿ, ಜಿಲ್ಲಾ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರು ಮತ್ತು ಮೇಲ್ವಿಚಾರಕರು, ಸಂಘದ ಸಿಬ್ಬಂದಿ, ಜನಪ್ರತಿನಿಧಿಗಳು, ಉಪಸ್ಥಿತರಿದ್ದರು.
ಯತೀಶ್ ಪ್ರಾರ್ಥಿಸಿದರು. ಪ್ರಭಾರ ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಸ್ವಾಗತಿಸಿ, ಪ್ರಮೀಳಾ ಭಾರದ್ವಾಜ್ ವಂದಿಸಿದರು. ಬ್ಯಾಂಕ್ನ ಸಿಬ್ಬಂದಿಗಳಾದ ಜಾನಕಿ ಎನ್.ಎಸ್ ಮತ್ತು ಗೋಪಾಲಕೃಷ್ಣ ಅಡ್ತಲೆ ಅವರು ನಿರೂಪಿಸಿದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…