ಸುದ್ದಿಗಳು

ಪೆರಾಜೆ ಸಹಕಾರ ಸಂಘಕ್ಕೆ ನೂತನ ವರ್ಷದಲ್ಲೇ ರೂ.9.59 ಲಕ್ಷ ಲಾಭ : ನಾಗೇಶ್ ಕುಂದಲ್ಪಾಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೆರಾಜೆ: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪೆರಾಜೆ ಇದರ 2018-19ರ ನೂತನ ವರ್ಷದಲ್ಲಿ ರೂ. 9.59 ಲಕ್ಷ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ತಿಳಿಸಿದ್ದಾರೆ.

Advertisement

ಪೆರಾಜೆಯ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪಾರದರ್ಶಕ ಮತ್ತು ಸಕರಾತ್ಮಕ ಸಹಕಾರ ಮನೋಭಾವನೆಯ ಸೇವೆಯೇ ನಮ್ಮ ಮೊದಲ ಗುರಿ. ಸದಸ್ಯರು ಸ್ವಾವಲಂಬಿಗಳಾಗುವಲ್ಲಿ ಸಂಘದ ವತಿಯಿಂದ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಸದಸ್ಯರು ಸಾಲಮನ್ನಾ ಮೊತ್ತವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಸಕಾಲದಲ್ಲಿ ಸಾಲ ಮರುಪಾವತಿಸಿ ಹೊಂದಿಕೊಳ್ಳುವ ಬಗ್ಗೆ ಹಾಗೂ ಕೃಷಿ ಉತ್ಪನ್ನಗಳನ್ನು ಸಂಘದ ಮುಖಾಂತರವೇ ಮಾರಾಟ ಮಾಡಿ ಸಂಘದ ವ್ಯವಹಾರಗಳನ್ನು ಹೆಚ್ಚಿಸುವುದರ ಜೊತೆಗೆ ತಾವೂ ಆರ್ಥಿಕವಾಗಿ ಸದೃಡರಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾ.ಕೃ.ಪ.ಸ ಸಂಘದ ಉಪಾಧ್ಯಕ್ಷ ಮೋನಪ್ಪ ನಿಡ್ಯಮಲೆ, ನಿರ್ದೇಶಕರುಗಳಾದ ಅಶೋಕ್ ಪೆರುಮುಂಡ, ಗಾಂಧಿಪ್ರಸಾದ್ ಬಂಗಾರಕೋಡಿ, ದಿನರಾಜ ದೊಡ್ಡಡ್ಕ, ಪ್ರಸನ್ನ ನೆಕ್ಕಿಲ, ರೇಣುಕಾ.ಎಲ್ ಕುಂದಲ್ಪಾಡಿ , ಪ್ರಮೀಳ ಭಾರದ್ವಾಜ್, ಉದಯ ಆಚಾರ್, ದಾಸಪ್ಪ ಮಡಿವಾಳ, ಜಯರಾಮ .ಪಿ.ಟಿ. ಕಿರಣ್ ಬಂಗಾರಕೋಡಿ, ಶೇಷಪ್ಪ ಎನ್.ವಿ, ಜಿಲ್ಲಾ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರು ಮತ್ತು ಮೇಲ್ವಿಚಾರಕರು, ಸಂಘದ ಸಿಬ್ಬಂದಿ, ಜನಪ್ರತಿನಿಧಿಗಳು, ಉಪಸ್ಥಿತರಿದ್ದರು.

ಯತೀಶ್ ಪ್ರಾರ್ಥಿಸಿದರು‌‌. ಪ್ರಭಾರ ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಸ್ವಾಗತಿಸಿ, ಪ್ರಮೀಳಾ ಭಾರದ್ವಾಜ್ ವಂದಿಸಿದರು. ಬ್ಯಾಂಕ್‌ನ ಸಿಬ್ಬಂದಿಗಳಾದ ಜಾನಕಿ ಎನ್.ಎಸ್ ಮತ್ತು ಗೋಪಾಲಕೃಷ್ಣ ಅಡ್ತಲೆ ಅವರು ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

4 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

7 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

10 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

11 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

11 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

11 hours ago