ಪೆರಾಜೆ: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪೆರಾಜೆ ಇದರ 2018-19ರ ನೂತನ ವರ್ಷದಲ್ಲಿ ರೂ. 9.59 ಲಕ್ಷ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ತಿಳಿಸಿದ್ದಾರೆ.
ಪೆರಾಜೆಯ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪಾರದರ್ಶಕ ಮತ್ತು ಸಕರಾತ್ಮಕ ಸಹಕಾರ ಮನೋಭಾವನೆಯ ಸೇವೆಯೇ ನಮ್ಮ ಮೊದಲ ಗುರಿ. ಸದಸ್ಯರು ಸ್ವಾವಲಂಬಿಗಳಾಗುವಲ್ಲಿ ಸಂಘದ ವತಿಯಿಂದ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಸದಸ್ಯರು ಸಾಲಮನ್ನಾ ಮೊತ್ತವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಸಕಾಲದಲ್ಲಿ ಸಾಲ ಮರುಪಾವತಿಸಿ ಹೊಂದಿಕೊಳ್ಳುವ ಬಗ್ಗೆ ಹಾಗೂ ಕೃಷಿ ಉತ್ಪನ್ನಗಳನ್ನು ಸಂಘದ ಮುಖಾಂತರವೇ ಮಾರಾಟ ಮಾಡಿ ಸಂಘದ ವ್ಯವಹಾರಗಳನ್ನು ಹೆಚ್ಚಿಸುವುದರ ಜೊತೆಗೆ ತಾವೂ ಆರ್ಥಿಕವಾಗಿ ಸದೃಡರಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾ.ಕೃ.ಪ.ಸ ಸಂಘದ ಉಪಾಧ್ಯಕ್ಷ ಮೋನಪ್ಪ ನಿಡ್ಯಮಲೆ, ನಿರ್ದೇಶಕರುಗಳಾದ ಅಶೋಕ್ ಪೆರುಮುಂಡ, ಗಾಂಧಿಪ್ರಸಾದ್ ಬಂಗಾರಕೋಡಿ, ದಿನರಾಜ ದೊಡ್ಡಡ್ಕ, ಪ್ರಸನ್ನ ನೆಕ್ಕಿಲ, ರೇಣುಕಾ.ಎಲ್ ಕುಂದಲ್ಪಾಡಿ , ಪ್ರಮೀಳ ಭಾರದ್ವಾಜ್, ಉದಯ ಆಚಾರ್, ದಾಸಪ್ಪ ಮಡಿವಾಳ, ಜಯರಾಮ .ಪಿ.ಟಿ. ಕಿರಣ್ ಬಂಗಾರಕೋಡಿ, ಶೇಷಪ್ಪ ಎನ್.ವಿ, ಜಿಲ್ಲಾ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರು ಮತ್ತು ಮೇಲ್ವಿಚಾರಕರು, ಸಂಘದ ಸಿಬ್ಬಂದಿ, ಜನಪ್ರತಿನಿಧಿಗಳು, ಉಪಸ್ಥಿತರಿದ್ದರು.
ಯತೀಶ್ ಪ್ರಾರ್ಥಿಸಿದರು. ಪ್ರಭಾರ ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಸ್ವಾಗತಿಸಿ, ಪ್ರಮೀಳಾ ಭಾರದ್ವಾಜ್ ವಂದಿಸಿದರು. ಬ್ಯಾಂಕ್ನ ಸಿಬ್ಬಂದಿಗಳಾದ ಜಾನಕಿ ಎನ್.ಎಸ್ ಮತ್ತು ಗೋಪಾಲಕೃಷ್ಣ ಅಡ್ತಲೆ ಅವರು ನಿರೂಪಿಸಿದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…