ಪೆರುವಾಜೆ -ಬೆಳಂದೂರು ಸಂಪರ್ಕ ರಸ್ತೆಯಲ್ಲಿ ಕೇಬಲ್‍ಗಾಗಿ ಗುಂಡಿ : ಸಾರ್ವಜನಿಕರಿಗೆ ತೊಂದರೆ

January 1, 2020
3:11 PM

ಸವಣೂರು : ಬೆಳಂದೂರು- ಪೆರುವಾಜೆ ರಸ್ತೆಯಲ್ಲಿ ವಾಹನ ಚಲಾಯಿಸುವುದು ಬಿಡಿ, ನಡೆದಾಡಲೂ ಸಾಧ್ಯವಾಗದು. ಅಷ್ಟು ಕುಲಗೆಟ್ಟು ಹೋಗಿದೆ. ತೀರಾ ಹದಗೆಟ್ಟಿರುವ ಬೆಳಂದೂರು – ಪೆರುವಾಜೆ ರಸ್ತೆಯ ಮೂಲಕ ಕಂಪ, ಪಾತಾಜೆ, ಪೆರುವಾಜೆ, ಪೆರುವೋಡಿ ಮೊದಲಾದೆಡೆ ಹೋಗಬಹುದಾಗಿದ್ದು, ಈ ರಸ್ತೆಯಲ್ಲಿ ಬೆಳಂದೂರುನಿಂದ ಬೆಳ್ಳಾರೆಗೆ ಇರುವ ದೂರ ಕೇವಲ 9 ಕಿ.ಮೀ. ಆದರೆ ಈ ರಸ್ತೆಯ ದುರವಸ್ಥೆಯಿಂದ ಜನತೆ ಸುತ್ತು ಬಳಸಿ ಪ್ರಯಾಣಿಸುವಂತಹ ಪರಿಸ್ಥಿತಿ. ಈಗ ಈ ಸಮಸ್ಯೆಗೆ ಇನ್ನೊಂದು ದೊಡ್ಡ ಸಮಸ್ಯೆಯನ್ನು ಖಾಸಗಿ ಸಂಸ್ಥೆಯ ಅಳವಡಿಸುವವರು ಮಾಡಿದ್ದಾರೆ. ಕಾಪುತಕಾಡಿನಿಂದ ಕುಂಬೋಡಿವರೆಗಿನ ಸುಮಾರು 5 ಕಿ.ಮೀ ರಸ್ತೆ ಬದಿಯಲ್ಲಿ ಕೇಬಲ್ ಗುಂಡಿ ತೆಗೆದಿದ್ದಾರೆ.

Advertisement
Advertisement

ಬೆಳಂದೂರಿನಿಂದ ಪೆರುವಾಜೆಗೆ ಹೋಗಲು ಯಾವ ಆಟೋ ಚಾಲಕರೂ ಮುಂದೆ ಬರುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸಿದರೆ ಸಿಗುವ ಬಾಡಿಗೆಗಿಂತ ಹೆಚ್ಚು ಹಣ ವಾಹನ ರಿಪೇರಿಗೆ ಬೇಕಾಗುತ್ತದೆ ಎಂಬುದು ರಿಕ್ಷಾ ಚಾಲಕರ ಅಭಿಪ್ರಾಯ. ಹೀಗಾಗಿ ಹೆಚ್ಚಿನವರು ಸಣ್ಣ ಪ್ರಮಾಣದ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡೇ ಹೋಗುವಂತಹ ಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಯಿರುವ ಈ ರಸ್ತೆಯಲ್ಲಿ ಈಗ ಕೇಬಲ್ ಅಳವಡಿಕೆಗಾಗಿ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತೆಗೆದ ಹೊಂಡ ಅಪಾಯವನ್ನು ತಂದೊಡ್ಡಿದೆ. ಕಿರಿದಾದ ರಸ್ತೆ ಆಗಿರುವುದರಿಂದ ವಾಹನಗಳು ಎದುರು ಬದುರಾದರೆ ಸೈಡ್ ಕೊಡಲು ಕಷ್ಟ ಪಡುವ ಸ್ಥಿತಿ ಇದೆ. ಈಗ ಕೇಬಲ್ ಗುಂಡಿಯಿಂದಾಗಿ ವಾಹನಗಳು ಎದುರು ಬದುರಾದರೂ 5 ಕಿ.ಮೀ ಹಿಂದಕ್ಕೆ ಚಲಿಸುವಂತಹ ಸ್ಥಿತಿ ಇದೆ.

Advertisement

ಸೂಕ್ತ ಕ್ರಮಕ್ಕೆ ಒತ್ತಾಯ: ರಸ್ತೆಯ ಬದಿಯಲ್ಲಿ ಕೇಬಲ್ ಗುಂಡಿ ತೆರೆದು ಸಾರ್ವಜನಿಕ ಸಮಸ್ಯೆ ಉಂಟು ಮಾಡಿದವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಈ ಸಮಸ್ಯೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror