ಸವಣೂರು : ಬೆಳಂದೂರು- ಪೆರುವಾಜೆ ರಸ್ತೆಯಲ್ಲಿ ವಾಹನ ಚಲಾಯಿಸುವುದು ಬಿಡಿ, ನಡೆದಾಡಲೂ ಸಾಧ್ಯವಾಗದು. ಅಷ್ಟು ಕುಲಗೆಟ್ಟು ಹೋಗಿದೆ. ತೀರಾ ಹದಗೆಟ್ಟಿರುವ ಬೆಳಂದೂರು – ಪೆರುವಾಜೆ ರಸ್ತೆಯ ಮೂಲಕ ಕಂಪ, ಪಾತಾಜೆ, ಪೆರುವಾಜೆ, ಪೆರುವೋಡಿ ಮೊದಲಾದೆಡೆ ಹೋಗಬಹುದಾಗಿದ್ದು, ಈ ರಸ್ತೆಯಲ್ಲಿ ಬೆಳಂದೂರುನಿಂದ ಬೆಳ್ಳಾರೆಗೆ ಇರುವ ದೂರ ಕೇವಲ 9 ಕಿ.ಮೀ. ಆದರೆ ಈ ರಸ್ತೆಯ ದುರವಸ್ಥೆಯಿಂದ ಜನತೆ ಸುತ್ತು ಬಳಸಿ ಪ್ರಯಾಣಿಸುವಂತಹ ಪರಿಸ್ಥಿತಿ. ಈಗ ಈ ಸಮಸ್ಯೆಗೆ ಇನ್ನೊಂದು ದೊಡ್ಡ ಸಮಸ್ಯೆಯನ್ನು ಖಾಸಗಿ ಸಂಸ್ಥೆಯ ಅಳವಡಿಸುವವರು ಮಾಡಿದ್ದಾರೆ. ಕಾಪುತಕಾಡಿನಿಂದ ಕುಂಬೋಡಿವರೆಗಿನ ಸುಮಾರು 5 ಕಿ.ಮೀ ರಸ್ತೆ ಬದಿಯಲ್ಲಿ ಕೇಬಲ್ ಗುಂಡಿ ತೆಗೆದಿದ್ದಾರೆ.
ಬೆಳಂದೂರಿನಿಂದ ಪೆರುವಾಜೆಗೆ ಹೋಗಲು ಯಾವ ಆಟೋ ಚಾಲಕರೂ ಮುಂದೆ ಬರುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸಿದರೆ ಸಿಗುವ ಬಾಡಿಗೆಗಿಂತ ಹೆಚ್ಚು ಹಣ ವಾಹನ ರಿಪೇರಿಗೆ ಬೇಕಾಗುತ್ತದೆ ಎಂಬುದು ರಿಕ್ಷಾ ಚಾಲಕರ ಅಭಿಪ್ರಾಯ. ಹೀಗಾಗಿ ಹೆಚ್ಚಿನವರು ಸಣ್ಣ ಪ್ರಮಾಣದ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡೇ ಹೋಗುವಂತಹ ಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಯಿರುವ ಈ ರಸ್ತೆಯಲ್ಲಿ ಈಗ ಕೇಬಲ್ ಅಳವಡಿಕೆಗಾಗಿ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತೆಗೆದ ಹೊಂಡ ಅಪಾಯವನ್ನು ತಂದೊಡ್ಡಿದೆ. ಕಿರಿದಾದ ರಸ್ತೆ ಆಗಿರುವುದರಿಂದ ವಾಹನಗಳು ಎದುರು ಬದುರಾದರೆ ಸೈಡ್ ಕೊಡಲು ಕಷ್ಟ ಪಡುವ ಸ್ಥಿತಿ ಇದೆ. ಈಗ ಕೇಬಲ್ ಗುಂಡಿಯಿಂದಾಗಿ ವಾಹನಗಳು ಎದುರು ಬದುರಾದರೂ 5 ಕಿ.ಮೀ ಹಿಂದಕ್ಕೆ ಚಲಿಸುವಂತಹ ಸ್ಥಿತಿ ಇದೆ.
ಸೂಕ್ತ ಕ್ರಮಕ್ಕೆ ಒತ್ತಾಯ: ರಸ್ತೆಯ ಬದಿಯಲ್ಲಿ ಕೇಬಲ್ ಗುಂಡಿ ತೆರೆದು ಸಾರ್ವಜನಿಕ ಸಮಸ್ಯೆ ಉಂಟು ಮಾಡಿದವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಈ ಸಮಸ್ಯೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…