Advertisement
ಸುದ್ದಿಗಳು

ಪೆರುವಾಜೆ -ಬೆಳಂದೂರು ಸಂಪರ್ಕ ರಸ್ತೆಯಲ್ಲಿ ಕೇಬಲ್‍ಗಾಗಿ ಗುಂಡಿ : ಸಾರ್ವಜನಿಕರಿಗೆ ತೊಂದರೆ

Share

ಸವಣೂರು : ಬೆಳಂದೂರು- ಪೆರುವಾಜೆ ರಸ್ತೆಯಲ್ಲಿ ವಾಹನ ಚಲಾಯಿಸುವುದು ಬಿಡಿ, ನಡೆದಾಡಲೂ ಸಾಧ್ಯವಾಗದು. ಅಷ್ಟು ಕುಲಗೆಟ್ಟು ಹೋಗಿದೆ. ತೀರಾ ಹದಗೆಟ್ಟಿರುವ ಬೆಳಂದೂರು – ಪೆರುವಾಜೆ ರಸ್ತೆಯ ಮೂಲಕ ಕಂಪ, ಪಾತಾಜೆ, ಪೆರುವಾಜೆ, ಪೆರುವೋಡಿ ಮೊದಲಾದೆಡೆ ಹೋಗಬಹುದಾಗಿದ್ದು, ಈ ರಸ್ತೆಯಲ್ಲಿ ಬೆಳಂದೂರುನಿಂದ ಬೆಳ್ಳಾರೆಗೆ ಇರುವ ದೂರ ಕೇವಲ 9 ಕಿ.ಮೀ. ಆದರೆ ಈ ರಸ್ತೆಯ ದುರವಸ್ಥೆಯಿಂದ ಜನತೆ ಸುತ್ತು ಬಳಸಿ ಪ್ರಯಾಣಿಸುವಂತಹ ಪರಿಸ್ಥಿತಿ. ಈಗ ಈ ಸಮಸ್ಯೆಗೆ ಇನ್ನೊಂದು ದೊಡ್ಡ ಸಮಸ್ಯೆಯನ್ನು ಖಾಸಗಿ ಸಂಸ್ಥೆಯ ಅಳವಡಿಸುವವರು ಮಾಡಿದ್ದಾರೆ. ಕಾಪುತಕಾಡಿನಿಂದ ಕುಂಬೋಡಿವರೆಗಿನ ಸುಮಾರು 5 ಕಿ.ಮೀ ರಸ್ತೆ ಬದಿಯಲ್ಲಿ ಕೇಬಲ್ ಗುಂಡಿ ತೆಗೆದಿದ್ದಾರೆ.

ಬೆಳಂದೂರಿನಿಂದ ಪೆರುವಾಜೆಗೆ ಹೋಗಲು ಯಾವ ಆಟೋ ಚಾಲಕರೂ ಮುಂದೆ ಬರುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸಿದರೆ ಸಿಗುವ ಬಾಡಿಗೆಗಿಂತ ಹೆಚ್ಚು ಹಣ ವಾಹನ ರಿಪೇರಿಗೆ ಬೇಕಾಗುತ್ತದೆ ಎಂಬುದು ರಿಕ್ಷಾ ಚಾಲಕರ ಅಭಿಪ್ರಾಯ. ಹೀಗಾಗಿ ಹೆಚ್ಚಿನವರು ಸಣ್ಣ ಪ್ರಮಾಣದ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡೇ ಹೋಗುವಂತಹ ಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಯಿರುವ ಈ ರಸ್ತೆಯಲ್ಲಿ ಈಗ ಕೇಬಲ್ ಅಳವಡಿಕೆಗಾಗಿ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತೆಗೆದ ಹೊಂಡ ಅಪಾಯವನ್ನು ತಂದೊಡ್ಡಿದೆ. ಕಿರಿದಾದ ರಸ್ತೆ ಆಗಿರುವುದರಿಂದ ವಾಹನಗಳು ಎದುರು ಬದುರಾದರೆ ಸೈಡ್ ಕೊಡಲು ಕಷ್ಟ ಪಡುವ ಸ್ಥಿತಿ ಇದೆ. ಈಗ ಕೇಬಲ್ ಗುಂಡಿಯಿಂದಾಗಿ ವಾಹನಗಳು ಎದುರು ಬದುರಾದರೂ 5 ಕಿ.ಮೀ ಹಿಂದಕ್ಕೆ ಚಲಿಸುವಂತಹ ಸ್ಥಿತಿ ಇದೆ.

ಸೂಕ್ತ ಕ್ರಮಕ್ಕೆ ಒತ್ತಾಯ: ರಸ್ತೆಯ ಬದಿಯಲ್ಲಿ ಕೇಬಲ್ ಗುಂಡಿ ತೆರೆದು ಸಾರ್ವಜನಿಕ ಸಮಸ್ಯೆ ಉಂಟು ಮಾಡಿದವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಈ ಸಮಸ್ಯೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

7 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

7 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 day ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago