Advertisement
ಸುದ್ದಿಗಳು

ಪೆರುವಾಜೆ -ಬೆಳಂದೂರು ಸಂಪರ್ಕ ರಸ್ತೆಯಲ್ಲಿ ಕೇಬಲ್‍ಗಾಗಿ ಗುಂಡಿ : ಸಾರ್ವಜನಿಕರಿಗೆ ತೊಂದರೆ

Share

ಸವಣೂರು : ಬೆಳಂದೂರು- ಪೆರುವಾಜೆ ರಸ್ತೆಯಲ್ಲಿ ವಾಹನ ಚಲಾಯಿಸುವುದು ಬಿಡಿ, ನಡೆದಾಡಲೂ ಸಾಧ್ಯವಾಗದು. ಅಷ್ಟು ಕುಲಗೆಟ್ಟು ಹೋಗಿದೆ. ತೀರಾ ಹದಗೆಟ್ಟಿರುವ ಬೆಳಂದೂರು – ಪೆರುವಾಜೆ ರಸ್ತೆಯ ಮೂಲಕ ಕಂಪ, ಪಾತಾಜೆ, ಪೆರುವಾಜೆ, ಪೆರುವೋಡಿ ಮೊದಲಾದೆಡೆ ಹೋಗಬಹುದಾಗಿದ್ದು, ಈ ರಸ್ತೆಯಲ್ಲಿ ಬೆಳಂದೂರುನಿಂದ ಬೆಳ್ಳಾರೆಗೆ ಇರುವ ದೂರ ಕೇವಲ 9 ಕಿ.ಮೀ. ಆದರೆ ಈ ರಸ್ತೆಯ ದುರವಸ್ಥೆಯಿಂದ ಜನತೆ ಸುತ್ತು ಬಳಸಿ ಪ್ರಯಾಣಿಸುವಂತಹ ಪರಿಸ್ಥಿತಿ. ಈಗ ಈ ಸಮಸ್ಯೆಗೆ ಇನ್ನೊಂದು ದೊಡ್ಡ ಸಮಸ್ಯೆಯನ್ನು ಖಾಸಗಿ ಸಂಸ್ಥೆಯ ಅಳವಡಿಸುವವರು ಮಾಡಿದ್ದಾರೆ. ಕಾಪುತಕಾಡಿನಿಂದ ಕುಂಬೋಡಿವರೆಗಿನ ಸುಮಾರು 5 ಕಿ.ಮೀ ರಸ್ತೆ ಬದಿಯಲ್ಲಿ ಕೇಬಲ್ ಗುಂಡಿ ತೆಗೆದಿದ್ದಾರೆ.

ಬೆಳಂದೂರಿನಿಂದ ಪೆರುವಾಜೆಗೆ ಹೋಗಲು ಯಾವ ಆಟೋ ಚಾಲಕರೂ ಮುಂದೆ ಬರುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸಿದರೆ ಸಿಗುವ ಬಾಡಿಗೆಗಿಂತ ಹೆಚ್ಚು ಹಣ ವಾಹನ ರಿಪೇರಿಗೆ ಬೇಕಾಗುತ್ತದೆ ಎಂಬುದು ರಿಕ್ಷಾ ಚಾಲಕರ ಅಭಿಪ್ರಾಯ. ಹೀಗಾಗಿ ಹೆಚ್ಚಿನವರು ಸಣ್ಣ ಪ್ರಮಾಣದ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡೇ ಹೋಗುವಂತಹ ಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಯಿರುವ ಈ ರಸ್ತೆಯಲ್ಲಿ ಈಗ ಕೇಬಲ್ ಅಳವಡಿಕೆಗಾಗಿ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತೆಗೆದ ಹೊಂಡ ಅಪಾಯವನ್ನು ತಂದೊಡ್ಡಿದೆ. ಕಿರಿದಾದ ರಸ್ತೆ ಆಗಿರುವುದರಿಂದ ವಾಹನಗಳು ಎದುರು ಬದುರಾದರೆ ಸೈಡ್ ಕೊಡಲು ಕಷ್ಟ ಪಡುವ ಸ್ಥಿತಿ ಇದೆ. ಈಗ ಕೇಬಲ್ ಗುಂಡಿಯಿಂದಾಗಿ ವಾಹನಗಳು ಎದುರು ಬದುರಾದರೂ 5 ಕಿ.ಮೀ ಹಿಂದಕ್ಕೆ ಚಲಿಸುವಂತಹ ಸ್ಥಿತಿ ಇದೆ.

ಸೂಕ್ತ ಕ್ರಮಕ್ಕೆ ಒತ್ತಾಯ: ರಸ್ತೆಯ ಬದಿಯಲ್ಲಿ ಕೇಬಲ್ ಗುಂಡಿ ತೆರೆದು ಸಾರ್ವಜನಿಕ ಸಮಸ್ಯೆ ಉಂಟು ಮಾಡಿದವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಈ ಸಮಸ್ಯೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

3 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

4 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

4 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

6 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

18 hours ago