Advertisement
ಸುದ್ದಿಗಳು

ಪೆರುವಾಜೆ -ಬೆಳಂದೂರು ಸಂಪರ್ಕ ರಸ್ತೆಯಲ್ಲಿ ಕೇಬಲ್‍ಗಾಗಿ ಗುಂಡಿ : ಸಾರ್ವಜನಿಕರಿಗೆ ತೊಂದರೆ

Share

ಸವಣೂರು : ಬೆಳಂದೂರು- ಪೆರುವಾಜೆ ರಸ್ತೆಯಲ್ಲಿ ವಾಹನ ಚಲಾಯಿಸುವುದು ಬಿಡಿ, ನಡೆದಾಡಲೂ ಸಾಧ್ಯವಾಗದು. ಅಷ್ಟು ಕುಲಗೆಟ್ಟು ಹೋಗಿದೆ. ತೀರಾ ಹದಗೆಟ್ಟಿರುವ ಬೆಳಂದೂರು – ಪೆರುವಾಜೆ ರಸ್ತೆಯ ಮೂಲಕ ಕಂಪ, ಪಾತಾಜೆ, ಪೆರುವಾಜೆ, ಪೆರುವೋಡಿ ಮೊದಲಾದೆಡೆ ಹೋಗಬಹುದಾಗಿದ್ದು, ಈ ರಸ್ತೆಯಲ್ಲಿ ಬೆಳಂದೂರುನಿಂದ ಬೆಳ್ಳಾರೆಗೆ ಇರುವ ದೂರ ಕೇವಲ 9 ಕಿ.ಮೀ. ಆದರೆ ಈ ರಸ್ತೆಯ ದುರವಸ್ಥೆಯಿಂದ ಜನತೆ ಸುತ್ತು ಬಳಸಿ ಪ್ರಯಾಣಿಸುವಂತಹ ಪರಿಸ್ಥಿತಿ. ಈಗ ಈ ಸಮಸ್ಯೆಗೆ ಇನ್ನೊಂದು ದೊಡ್ಡ ಸಮಸ್ಯೆಯನ್ನು ಖಾಸಗಿ ಸಂಸ್ಥೆಯ ಅಳವಡಿಸುವವರು ಮಾಡಿದ್ದಾರೆ. ಕಾಪುತಕಾಡಿನಿಂದ ಕುಂಬೋಡಿವರೆಗಿನ ಸುಮಾರು 5 ಕಿ.ಮೀ ರಸ್ತೆ ಬದಿಯಲ್ಲಿ ಕೇಬಲ್ ಗುಂಡಿ ತೆಗೆದಿದ್ದಾರೆ.

ಬೆಳಂದೂರಿನಿಂದ ಪೆರುವಾಜೆಗೆ ಹೋಗಲು ಯಾವ ಆಟೋ ಚಾಲಕರೂ ಮುಂದೆ ಬರುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸಿದರೆ ಸಿಗುವ ಬಾಡಿಗೆಗಿಂತ ಹೆಚ್ಚು ಹಣ ವಾಹನ ರಿಪೇರಿಗೆ ಬೇಕಾಗುತ್ತದೆ ಎಂಬುದು ರಿಕ್ಷಾ ಚಾಲಕರ ಅಭಿಪ್ರಾಯ. ಹೀಗಾಗಿ ಹೆಚ್ಚಿನವರು ಸಣ್ಣ ಪ್ರಮಾಣದ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡೇ ಹೋಗುವಂತಹ ಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಯಿರುವ ಈ ರಸ್ತೆಯಲ್ಲಿ ಈಗ ಕೇಬಲ್ ಅಳವಡಿಕೆಗಾಗಿ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತೆಗೆದ ಹೊಂಡ ಅಪಾಯವನ್ನು ತಂದೊಡ್ಡಿದೆ. ಕಿರಿದಾದ ರಸ್ತೆ ಆಗಿರುವುದರಿಂದ ವಾಹನಗಳು ಎದುರು ಬದುರಾದರೆ ಸೈಡ್ ಕೊಡಲು ಕಷ್ಟ ಪಡುವ ಸ್ಥಿತಿ ಇದೆ. ಈಗ ಕೇಬಲ್ ಗುಂಡಿಯಿಂದಾಗಿ ವಾಹನಗಳು ಎದುರು ಬದುರಾದರೂ 5 ಕಿ.ಮೀ ಹಿಂದಕ್ಕೆ ಚಲಿಸುವಂತಹ ಸ್ಥಿತಿ ಇದೆ.

ಸೂಕ್ತ ಕ್ರಮಕ್ಕೆ ಒತ್ತಾಯ: ರಸ್ತೆಯ ಬದಿಯಲ್ಲಿ ಕೇಬಲ್ ಗುಂಡಿ ತೆರೆದು ಸಾರ್ವಜನಿಕ ಸಮಸ್ಯೆ ಉಂಟು ಮಾಡಿದವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಈ ಸಮಸ್ಯೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

4 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

5 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

6 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

15 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

17 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago