ಸವಣೂರು : ಬೆಳಂದೂರು- ಪೆರುವಾಜೆ ರಸ್ತೆಯಲ್ಲಿ ವಾಹನ ಚಲಾಯಿಸುವುದು ಬಿಡಿ, ನಡೆದಾಡಲೂ ಸಾಧ್ಯವಾಗದು. ಅಷ್ಟು ಕುಲಗೆಟ್ಟು ಹೋಗಿದೆ. ತೀರಾ ಹದಗೆಟ್ಟಿರುವ ಬೆಳಂದೂರು – ಪೆರುವಾಜೆ ರಸ್ತೆಯ ಮೂಲಕ ಕಂಪ, ಪಾತಾಜೆ, ಪೆರುವಾಜೆ, ಪೆರುವೋಡಿ ಮೊದಲಾದೆಡೆ ಹೋಗಬಹುದಾಗಿದ್ದು, ಈ ರಸ್ತೆಯಲ್ಲಿ ಬೆಳಂದೂರುನಿಂದ ಬೆಳ್ಳಾರೆಗೆ ಇರುವ ದೂರ ಕೇವಲ 9 ಕಿ.ಮೀ. ಆದರೆ ಈ ರಸ್ತೆಯ ದುರವಸ್ಥೆಯಿಂದ ಜನತೆ ಸುತ್ತು ಬಳಸಿ ಪ್ರಯಾಣಿಸುವಂತಹ ಪರಿಸ್ಥಿತಿ. ಈಗ ಈ ಸಮಸ್ಯೆಗೆ ಇನ್ನೊಂದು ದೊಡ್ಡ ಸಮಸ್ಯೆಯನ್ನು ಖಾಸಗಿ ಸಂಸ್ಥೆಯ ಅಳವಡಿಸುವವರು ಮಾಡಿದ್ದಾರೆ. ಕಾಪುತಕಾಡಿನಿಂದ ಕುಂಬೋಡಿವರೆಗಿನ ಸುಮಾರು 5 ಕಿ.ಮೀ ರಸ್ತೆ ಬದಿಯಲ್ಲಿ ಕೇಬಲ್ ಗುಂಡಿ ತೆಗೆದಿದ್ದಾರೆ.
ಬೆಳಂದೂರಿನಿಂದ ಪೆರುವಾಜೆಗೆ ಹೋಗಲು ಯಾವ ಆಟೋ ಚಾಲಕರೂ ಮುಂದೆ ಬರುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸಿದರೆ ಸಿಗುವ ಬಾಡಿಗೆಗಿಂತ ಹೆಚ್ಚು ಹಣ ವಾಹನ ರಿಪೇರಿಗೆ ಬೇಕಾಗುತ್ತದೆ ಎಂಬುದು ರಿಕ್ಷಾ ಚಾಲಕರ ಅಭಿಪ್ರಾಯ. ಹೀಗಾಗಿ ಹೆಚ್ಚಿನವರು ಸಣ್ಣ ಪ್ರಮಾಣದ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡೇ ಹೋಗುವಂತಹ ಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಯಿರುವ ಈ ರಸ್ತೆಯಲ್ಲಿ ಈಗ ಕೇಬಲ್ ಅಳವಡಿಕೆಗಾಗಿ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತೆಗೆದ ಹೊಂಡ ಅಪಾಯವನ್ನು ತಂದೊಡ್ಡಿದೆ. ಕಿರಿದಾದ ರಸ್ತೆ ಆಗಿರುವುದರಿಂದ ವಾಹನಗಳು ಎದುರು ಬದುರಾದರೆ ಸೈಡ್ ಕೊಡಲು ಕಷ್ಟ ಪಡುವ ಸ್ಥಿತಿ ಇದೆ. ಈಗ ಕೇಬಲ್ ಗುಂಡಿಯಿಂದಾಗಿ ವಾಹನಗಳು ಎದುರು ಬದುರಾದರೂ 5 ಕಿ.ಮೀ ಹಿಂದಕ್ಕೆ ಚಲಿಸುವಂತಹ ಸ್ಥಿತಿ ಇದೆ.
ಸೂಕ್ತ ಕ್ರಮಕ್ಕೆ ಒತ್ತಾಯ: ರಸ್ತೆಯ ಬದಿಯಲ್ಲಿ ಕೇಬಲ್ ಗುಂಡಿ ತೆರೆದು ಸಾರ್ವಜನಿಕ ಸಮಸ್ಯೆ ಉಂಟು ಮಾಡಿದವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಈ ಸಮಸ್ಯೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…