ಸವಣೂರು : ಬೆಳಂದೂರು- ಪೆರುವಾಜೆ ರಸ್ತೆಯಲ್ಲಿ ವಾಹನ ಚಲಾಯಿಸುವುದು ಬಿಡಿ, ನಡೆದಾಡಲೂ ಸಾಧ್ಯವಾಗದು. ಅಷ್ಟು ಕುಲಗೆಟ್ಟು ಹೋಗಿದೆ. ತೀರಾ ಹದಗೆಟ್ಟಿರುವ ಬೆಳಂದೂರು – ಪೆರುವಾಜೆ ರಸ್ತೆಯ ಮೂಲಕ ಕಂಪ, ಪಾತಾಜೆ, ಪೆರುವಾಜೆ, ಪೆರುವೋಡಿ ಮೊದಲಾದೆಡೆ ಹೋಗಬಹುದಾಗಿದ್ದು, ಈ ರಸ್ತೆಯಲ್ಲಿ ಬೆಳಂದೂರುನಿಂದ ಬೆಳ್ಳಾರೆಗೆ ಇರುವ ದೂರ ಕೇವಲ 9 ಕಿ.ಮೀ. ಆದರೆ ಈ ರಸ್ತೆಯ ದುರವಸ್ಥೆಯಿಂದ ಜನತೆ ಸುತ್ತು ಬಳಸಿ ಪ್ರಯಾಣಿಸುವಂತಹ ಪರಿಸ್ಥಿತಿ. ಈಗ ಈ ಸಮಸ್ಯೆಗೆ ಇನ್ನೊಂದು ದೊಡ್ಡ ಸಮಸ್ಯೆಯನ್ನು ಖಾಸಗಿ ಸಂಸ್ಥೆಯ ಅಳವಡಿಸುವವರು ಮಾಡಿದ್ದಾರೆ. ಕಾಪುತಕಾಡಿನಿಂದ ಕುಂಬೋಡಿವರೆಗಿನ ಸುಮಾರು 5 ಕಿ.ಮೀ ರಸ್ತೆ ಬದಿಯಲ್ಲಿ ಕೇಬಲ್ ಗುಂಡಿ ತೆಗೆದಿದ್ದಾರೆ.
ಬೆಳಂದೂರಿನಿಂದ ಪೆರುವಾಜೆಗೆ ಹೋಗಲು ಯಾವ ಆಟೋ ಚಾಲಕರೂ ಮುಂದೆ ಬರುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸಿದರೆ ಸಿಗುವ ಬಾಡಿಗೆಗಿಂತ ಹೆಚ್ಚು ಹಣ ವಾಹನ ರಿಪೇರಿಗೆ ಬೇಕಾಗುತ್ತದೆ ಎಂಬುದು ರಿಕ್ಷಾ ಚಾಲಕರ ಅಭಿಪ್ರಾಯ. ಹೀಗಾಗಿ ಹೆಚ್ಚಿನವರು ಸಣ್ಣ ಪ್ರಮಾಣದ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡೇ ಹೋಗುವಂತಹ ಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಯಿರುವ ಈ ರಸ್ತೆಯಲ್ಲಿ ಈಗ ಕೇಬಲ್ ಅಳವಡಿಕೆಗಾಗಿ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತೆಗೆದ ಹೊಂಡ ಅಪಾಯವನ್ನು ತಂದೊಡ್ಡಿದೆ. ಕಿರಿದಾದ ರಸ್ತೆ ಆಗಿರುವುದರಿಂದ ವಾಹನಗಳು ಎದುರು ಬದುರಾದರೆ ಸೈಡ್ ಕೊಡಲು ಕಷ್ಟ ಪಡುವ ಸ್ಥಿತಿ ಇದೆ. ಈಗ ಕೇಬಲ್ ಗುಂಡಿಯಿಂದಾಗಿ ವಾಹನಗಳು ಎದುರು ಬದುರಾದರೂ 5 ಕಿ.ಮೀ ಹಿಂದಕ್ಕೆ ಚಲಿಸುವಂತಹ ಸ್ಥಿತಿ ಇದೆ.
ಸೂಕ್ತ ಕ್ರಮಕ್ಕೆ ಒತ್ತಾಯ: ರಸ್ತೆಯ ಬದಿಯಲ್ಲಿ ಕೇಬಲ್ ಗುಂಡಿ ತೆರೆದು ಸಾರ್ವಜನಿಕ ಸಮಸ್ಯೆ ಉಂಟು ಮಾಡಿದವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಈ ಸಮಸ್ಯೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…
ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…