Advertisement
ಸುದ್ದಿಗಳು

ಪೆರುವಾಜೆ -ಬೆಳಂದೂರು ಸಂಪರ್ಕ ರಸ್ತೆಯಲ್ಲಿ ಕೇಬಲ್‍ಗಾಗಿ ಗುಂಡಿ : ಸಾರ್ವಜನಿಕರಿಗೆ ತೊಂದರೆ

Share

ಸವಣೂರು : ಬೆಳಂದೂರು- ಪೆರುವಾಜೆ ರಸ್ತೆಯಲ್ಲಿ ವಾಹನ ಚಲಾಯಿಸುವುದು ಬಿಡಿ, ನಡೆದಾಡಲೂ ಸಾಧ್ಯವಾಗದು. ಅಷ್ಟು ಕುಲಗೆಟ್ಟು ಹೋಗಿದೆ. ತೀರಾ ಹದಗೆಟ್ಟಿರುವ ಬೆಳಂದೂರು – ಪೆರುವಾಜೆ ರಸ್ತೆಯ ಮೂಲಕ ಕಂಪ, ಪಾತಾಜೆ, ಪೆರುವಾಜೆ, ಪೆರುವೋಡಿ ಮೊದಲಾದೆಡೆ ಹೋಗಬಹುದಾಗಿದ್ದು, ಈ ರಸ್ತೆಯಲ್ಲಿ ಬೆಳಂದೂರುನಿಂದ ಬೆಳ್ಳಾರೆಗೆ ಇರುವ ದೂರ ಕೇವಲ 9 ಕಿ.ಮೀ. ಆದರೆ ಈ ರಸ್ತೆಯ ದುರವಸ್ಥೆಯಿಂದ ಜನತೆ ಸುತ್ತು ಬಳಸಿ ಪ್ರಯಾಣಿಸುವಂತಹ ಪರಿಸ್ಥಿತಿ. ಈಗ ಈ ಸಮಸ್ಯೆಗೆ ಇನ್ನೊಂದು ದೊಡ್ಡ ಸಮಸ್ಯೆಯನ್ನು ಖಾಸಗಿ ಸಂಸ್ಥೆಯ ಅಳವಡಿಸುವವರು ಮಾಡಿದ್ದಾರೆ. ಕಾಪುತಕಾಡಿನಿಂದ ಕುಂಬೋಡಿವರೆಗಿನ ಸುಮಾರು 5 ಕಿ.ಮೀ ರಸ್ತೆ ಬದಿಯಲ್ಲಿ ಕೇಬಲ್ ಗುಂಡಿ ತೆಗೆದಿದ್ದಾರೆ.

ಬೆಳಂದೂರಿನಿಂದ ಪೆರುವಾಜೆಗೆ ಹೋಗಲು ಯಾವ ಆಟೋ ಚಾಲಕರೂ ಮುಂದೆ ಬರುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸಿದರೆ ಸಿಗುವ ಬಾಡಿಗೆಗಿಂತ ಹೆಚ್ಚು ಹಣ ವಾಹನ ರಿಪೇರಿಗೆ ಬೇಕಾಗುತ್ತದೆ ಎಂಬುದು ರಿಕ್ಷಾ ಚಾಲಕರ ಅಭಿಪ್ರಾಯ. ಹೀಗಾಗಿ ಹೆಚ್ಚಿನವರು ಸಣ್ಣ ಪ್ರಮಾಣದ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡೇ ಹೋಗುವಂತಹ ಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಯಿರುವ ಈ ರಸ್ತೆಯಲ್ಲಿ ಈಗ ಕೇಬಲ್ ಅಳವಡಿಕೆಗಾಗಿ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತೆಗೆದ ಹೊಂಡ ಅಪಾಯವನ್ನು ತಂದೊಡ್ಡಿದೆ. ಕಿರಿದಾದ ರಸ್ತೆ ಆಗಿರುವುದರಿಂದ ವಾಹನಗಳು ಎದುರು ಬದುರಾದರೆ ಸೈಡ್ ಕೊಡಲು ಕಷ್ಟ ಪಡುವ ಸ್ಥಿತಿ ಇದೆ. ಈಗ ಕೇಬಲ್ ಗುಂಡಿಯಿಂದಾಗಿ ವಾಹನಗಳು ಎದುರು ಬದುರಾದರೂ 5 ಕಿ.ಮೀ ಹಿಂದಕ್ಕೆ ಚಲಿಸುವಂತಹ ಸ್ಥಿತಿ ಇದೆ.

ಸೂಕ್ತ ಕ್ರಮಕ್ಕೆ ಒತ್ತಾಯ: ರಸ್ತೆಯ ಬದಿಯಲ್ಲಿ ಕೇಬಲ್ ಗುಂಡಿ ತೆರೆದು ಸಾರ್ವಜನಿಕ ಸಮಸ್ಯೆ ಉಂಟು ಮಾಡಿದವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಈ ಸಮಸ್ಯೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

20 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

22 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

22 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago