ಬೆಳ್ಳಾರೆ : ಮುಕ್ಕೂರು ಪೆರುವಾಜೆ ಜ್ಯೋತಿ ಯುವಕ ಮಂಡಲ, ನವಜ್ಯೋತಿ ಯುವತಿ ಮಂಡಲ, ಶ್ರೀ ವಿಷ್ಣು ಭಜನ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಪೆರುವೋಡಿ ದೇವಸ್ಥಾನ ವಠಾರದಲ್ಲಿ ನಡೆಯಿತು.
ಅರ್ಚಕ ಸುರೇಶ್ ಉಪಾಧ್ಯಾಯ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಬಹುಮಾನ ವಿತರಿಸಿ ಮಾತನಾಡಿ, ಅಷ್ಟಮಿ ಪ್ರಯುಕ್ತ ಹಮ್ಮಿಕೊಂಡ ಕ್ರೀಡಾಕೂಟ ಮೂಲಕ ಊರಿನ ಜನರು ಒಂದೆಡೆ ಸೇರಿ ಸ್ಪರ್ಧೆಗಳಲ್ಲಿ ತೊಡಗಿ ಸಂಭ್ರಮಿಸಲು ಇದೊಂದು ಒಳ್ಳೆಯ ಅವಕಾಶ ಎಂದರು.
ಮುಖ್ಯ ಅತಿಥಿಗಳಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯೆ ದೇವಕಿ ಪೂವಪ್ಪ ಪೂಜಾರಿ, ಬೆಳ್ಳಾರೆ ಯುವ ಜೇಸೀ ನಿಕಟಪೂರ್ವಾಧ್ಯಕ್ಷ ಶರತ್ ಕುಮಾರ್ ನೀರ್ಕಜೆ ಮೊದಲಾದವರು ಉಪಸ್ಥಿತರಿದ್ದರು.
ಸುಸ್ಮಿತಾ ಕೊಂಡೆಪ್ಪಾಡಿ ಬಹುಮಾನ ಪಟ್ಟಿ ವಾಚಿಸಿದರು. ಜ್ಯೋತಿ ಯುವಕ ಮಂಡಲ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ ಸ್ವಾಗತಿಸಿ, ಕಾರ್ಯದರ್ಶಿ ನವೀನ್ ಶೆಟ್ಟಿ ಬರಮೇಲು ವಂದಿಸಿದರು. ಉಮೇಶ್ ಕೆಎಂಬಿ ನಿರೂಪಿಸಿದರು.
ವಿದ್ಯಾರ್ಥಿಗಳ, ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು.
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…