ಬೆಳ್ಳಾರೆ : ಮುಕ್ಕೂರು ಪೆರುವಾಜೆ ಜ್ಯೋತಿ ಯುವಕ ಮಂಡಲ, ನವಜ್ಯೋತಿ ಯುವತಿ ಮಂಡಲ, ಶ್ರೀ ವಿಷ್ಣು ಭಜನ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಪೆರುವೋಡಿ ದೇವಸ್ಥಾನ ವಠಾರದಲ್ಲಿ ನಡೆಯಿತು.
ಅರ್ಚಕ ಸುರೇಶ್ ಉಪಾಧ್ಯಾಯ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಬಹುಮಾನ ವಿತರಿಸಿ ಮಾತನಾಡಿ, ಅಷ್ಟಮಿ ಪ್ರಯುಕ್ತ ಹಮ್ಮಿಕೊಂಡ ಕ್ರೀಡಾಕೂಟ ಮೂಲಕ ಊರಿನ ಜನರು ಒಂದೆಡೆ ಸೇರಿ ಸ್ಪರ್ಧೆಗಳಲ್ಲಿ ತೊಡಗಿ ಸಂಭ್ರಮಿಸಲು ಇದೊಂದು ಒಳ್ಳೆಯ ಅವಕಾಶ ಎಂದರು.
ಮುಖ್ಯ ಅತಿಥಿಗಳಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯೆ ದೇವಕಿ ಪೂವಪ್ಪ ಪೂಜಾರಿ, ಬೆಳ್ಳಾರೆ ಯುವ ಜೇಸೀ ನಿಕಟಪೂರ್ವಾಧ್ಯಕ್ಷ ಶರತ್ ಕುಮಾರ್ ನೀರ್ಕಜೆ ಮೊದಲಾದವರು ಉಪಸ್ಥಿತರಿದ್ದರು.
ಸುಸ್ಮಿತಾ ಕೊಂಡೆಪ್ಪಾಡಿ ಬಹುಮಾನ ಪಟ್ಟಿ ವಾಚಿಸಿದರು. ಜ್ಯೋತಿ ಯುವಕ ಮಂಡಲ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ ಸ್ವಾಗತಿಸಿ, ಕಾರ್ಯದರ್ಶಿ ನವೀನ್ ಶೆಟ್ಟಿ ಬರಮೇಲು ವಂದಿಸಿದರು. ಉಮೇಶ್ ಕೆಎಂಬಿ ನಿರೂಪಿಸಿದರು.
ವಿದ್ಯಾರ್ಥಿಗಳ, ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು.
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…