ಬೆಳ್ಳಾರೆ : ಮುಕ್ಕೂರು ಪೆರುವಾಜೆ ಜ್ಯೋತಿ ಯುವಕ ಮಂಡಲ, ನವಜ್ಯೋತಿ ಯುವತಿ ಮಂಡಲ, ಶ್ರೀ ವಿಷ್ಣು ಭಜನ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಪೆರುವೋಡಿ ದೇವಸ್ಥಾನ ವಠಾರದಲ್ಲಿ ನಡೆಯಿತು.
ಅರ್ಚಕ ಸುರೇಶ್ ಉಪಾಧ್ಯಾಯ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಬಹುಮಾನ ವಿತರಿಸಿ ಮಾತನಾಡಿ, ಅಷ್ಟಮಿ ಪ್ರಯುಕ್ತ ಹಮ್ಮಿಕೊಂಡ ಕ್ರೀಡಾಕೂಟ ಮೂಲಕ ಊರಿನ ಜನರು ಒಂದೆಡೆ ಸೇರಿ ಸ್ಪರ್ಧೆಗಳಲ್ಲಿ ತೊಡಗಿ ಸಂಭ್ರಮಿಸಲು ಇದೊಂದು ಒಳ್ಳೆಯ ಅವಕಾಶ ಎಂದರು.
ಮುಖ್ಯ ಅತಿಥಿಗಳಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯೆ ದೇವಕಿ ಪೂವಪ್ಪ ಪೂಜಾರಿ, ಬೆಳ್ಳಾರೆ ಯುವ ಜೇಸೀ ನಿಕಟಪೂರ್ವಾಧ್ಯಕ್ಷ ಶರತ್ ಕುಮಾರ್ ನೀರ್ಕಜೆ ಮೊದಲಾದವರು ಉಪಸ್ಥಿತರಿದ್ದರು.
ಸುಸ್ಮಿತಾ ಕೊಂಡೆಪ್ಪಾಡಿ ಬಹುಮಾನ ಪಟ್ಟಿ ವಾಚಿಸಿದರು. ಜ್ಯೋತಿ ಯುವಕ ಮಂಡಲ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ ಸ್ವಾಗತಿಸಿ, ಕಾರ್ಯದರ್ಶಿ ನವೀನ್ ಶೆಟ್ಟಿ ಬರಮೇಲು ವಂದಿಸಿದರು. ಉಮೇಶ್ ಕೆಎಂಬಿ ನಿರೂಪಿಸಿದರು.
ವಿದ್ಯಾರ್ಥಿಗಳ, ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…