ಬೆಳ್ಳಾರೆ :ಪೆರುವಾಜೆ ಗ್ರಾಮದ ಮುಕ್ಕೂರು ಜ್ಯೋತಿ ಯುವಕ ಮಂಡಲ ಮತ್ತು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲಾ 10 ಸಾವಿರ ಮೌಲ್ಯದ ನೀರು ಸಂಗ್ರಹದ 2 ಟ್ಯಾಂಕ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ಸಮಿತಿ ಅಧ್ಯಕ್ಷರಾದ ಸಂಜೀವ ಗೌಡ ಬೈಲಂಗಡಿ ಮತ್ತು ನಾರಾಯಣ ಕೊಂಡೆಪ್ಪಾಡಿ ಅವರು ದೇವಾಲಯದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್ ಕೊಂಡೆಪ್ಪಾಡಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಅರ್ಚಕ ಸುರೇಶ್ ಉಪಾಧ್ಯಾಯ, ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ, ಕುಶಾಲಪ್ಪ ಗೌಡ ಪೆರುವಾಜೆ, ಸತ್ಯಪ್ರಸಾದ್ ಕಂಡಿಪ್ಪಾಡಿ, ದಯಾನಂದ ಗೌಡ ಜಾಲು, ಸಮಿತಿ ಪದಾಧಿಕಾರಿಗಳಾದ ವಿಜಯ ಕುಮಾರ್ ರೈ ಪೆರ್ವೋಡಿ, ದಿವಾಕರ ಬೀರುಸಾಗು, ಕಿರಣ್ ಚಾಮುಂಡಿಮೂಲೆ, ಸಚಿನ್ ರೈ ಪೂವಾಜೆ, ಗೋಪಾಲಕೃಷ್ಣ ಸಂಕೇಶ, ನವೀನ್ ಶೆಟ್ಟಿ ಬರಮೇಲು, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel